Home / ಕವನ / ಕವಿತೆ / ಕರಾಳ ಬಾಯಿ

ಕರಾಳ ಬಾಯಿ

ಮಹಾ ಭೀಕರ ಕರಾಳ ಬಾಯಿ
ಯಾವುದೋ ಬಗೆಯಲ್ಲಿ ಕಬಳಿಸಬಹುದು
ಈ ಬಣ್ಣ ಬಣ್ಣದ ಮಾಯದ ಬದುಕನ್ನು
ಅಸಂಖ್ಯ ಧ್ವನಿಗಳು ಪ್ರಾಣಗಳೊಡನೆ
ಭೂಮಿಯೊಳಗೆ ಅಡಗುತ್ತವೆ
ಭೀಕರ ಬಾಯಿಯ ಸ್ವಾಟೆಯೊಳಗಿಂದ
ಉಳಿದು ಜಾರಿದ ಜೊಲ್ಲಿನಂತೆ
ಕೆಲವು ಆಕ್ರಂದನ ಧ್ವನಿಗಳು ಉಳಿಯುತ್ತವೆ
ತಣ್ಣಗಿನ ಉಪ್ಪು ನೀರು ಮೇರೆ ಮೀರಿ
ತನ್ನ ಕಪ್ಪು ನಾಲಗೆಯ ಚಾಚಿ
ದಂಡೆಗಳ ಜೀವರಾಶಿಗಳ
ಸುರ್ರೆಂದು ಸೆಳೆದುಕೊಳ್ಳಬಹುದು
ತನ್ನೊಡಲೊಳಗೆ
ಹೆಣಗಳು ಚೆಲ್ಲಾಪಿಲ್ಲಿ ದುರ್ವಾಸನೆ
ಅಗೋಚರ ರೋಗಪಾಶಗಳು
ಸಾಂಕ್ರಾಮಿಕ ನುಂಗಬಹುದು
ಊರು ಸೀಮೆಗಳ ಮಸಣ ಮಾಡಿ
ಕಾಳ್ಗಿಚ್ಚು ಕೆರಳಬಹುದು
ಅಡವಿಗಳು ಸಾಲದೆ ಊರುಗಳನ್ನು
ಚಪ್ಪರಿಸಿ ಕಬಳಿಸಬಹುದು
ಯುದ್ಧಗಳು ಬದ್ಧದ್ವೇಷಗಳು
ಬಾಂಬು ಬೀಜಗಳ ಬಿತ್ತಿ
ಬೆಳೆಯಬಹುದು ಹೆಣದ ಬಣವೆಗಳ
ನಂದನವನದ ನೆಲವಾಗುವುದು
ಕೆಂಡಬೂದಿಗಳ ಸುಡುಗಾಡು
ವಿಷಾನಿಲಗಳು ಉಸಿರುಕಟ್ಟಿಸಬಹುದು
ಮೇಲಿಂದ ಮೇಲೆ ಅಗೋಚರ ಆಪತ್ತುಗಳು
ಎರಗಬಹುದು ಬೆಚ್ಚಿಗಿನ ಬದುಕಿನ ಮೇಲೆ
ಮಾಡಬಹುದು ಜೀವಾಂಡ ಬ್ರಹಾಂಡವ
ಒಣ ಹುಡಿ ಬರಡು ಗ್ರಹದುಂಡೆ
ಅಬ್ಬಾ ಈ ಕಪ್ಪು ಕೈ ಕರಾಳ ಬಾಯಿ
ಅದೆಷ್ಟು ಕ್ರೂರ ಕಠೋರ
ನಿರ್ದಯ ನೀರವ
ಅಗೋಚರ ಅನಿರೀಕ್ಷಿತ ಅನಿವಾರ್ಯ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...