Home / ಕವನ / ಕವಿತೆ / ವಿಶ್ವಕರ್ಮ ಸೂಕ್ತ

ವಿಶ್ವಕರ್ಮ ಸೂಕ್ತ

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು
ಹೋತಾರನಾಗಿ ಯಜ್ಞದಲಿ ಅರ್ಪಿಸಿದ
ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ
ಮೊದಲಿಗನು ತಾನಾಗಿ ಸೇರಿಹೋದ

ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು
ಯಾವುದದು ತಾನಿತ್ತು ಹೇಗೆ ಇತ್ತು
ವಿಶ್ವಚಕ್ಷುವು ವಿಶ್ವಕರ್ಮನಾ ಮಹಿಮೆಯದು
ಈ ಭೂಮಿಗಗನಗಳ ಸೃಷ್ಟಿಸಿತ್ತು

ವಿಶ್ವವೆಲ್ಲಾ ಕಣ್ಣು ವಿಶ್ವವೆಲ್ಲಾ ಬಾಯಿ
ವಿಶ್ವವೆಲ್ಲಾ ಬಾಹು ಪಾದವಿರುವ
ಹಕ್ಕಿ ರೆಕ್ಕೆಗಳಂತೆ ತೆಕ್ಕೆಯಲಿ ಆ ದೇವ
ಬಾನು ಭೂಮಿಗಳನ್ನು ನಿರ್ಮಿಸಿರುವ

ಯಾವ ವನವದು ಅಲ್ಲಿ ಯಾವ ವೃಕ್ಷವು ಇತ್ತು
ಎಲ್ಲಿ ಈ ಭೂ ಬಾನು ಅಡಗಿದ್ದವು
ಮತಿವಂತ ಮಾನವರೆ ಮನದೊಳಗೆ ಚಿಂತಿಸಿರಿ
ಯಾವುದದು ಭುವನವನು ಧರಿಸಿರುವುದು

ಮೇಲಿರುವುದೆಲ್ಲವೂ ಕೆಳಗಿರುವುದೆಲ್ಲವೂ
ನಡುವಿರುವುದೆಲ್ಲವೂ ನೀ ವಿಶ್ವಕರ್ಮ
ಹವಿಸ್ಸನರ್ಪಿಸುವುದನು ಕಲಿಸು ಗೆಳೆಯರಿಗೆಲ್ಲ
ತನ್ನ ಅರ್ಪಿಸಿ ತಾನು ವೃದ್ಧಿಸುವ ಮರ್ಮ

ವಿಶ್ಚಕರ್ಮನೆ ಸ್ವತಃ ಈ ಭೂಮಿ ಸ್ವರ್ಗಗಳ
ಯಜ್ಞದಲ್ಲಾಜ್ಯ ಮಾಡಿದ ಪರಿಯಲಿ
ಸುತ್ತಲಿನ ಜನ ಮರುಳುತನದಲ್ಲಿ ಮುಳುಗಿರಲಿ
ಇಹದಿ ಸಂಪದ ಜ್ಞಾನ ನಮಗಾಗಲಿ

ವೇಗಮತಿ ವಾಕ್ಪತಿಯೆ ವಿಶ್ಚಕರ್ಮನೆ ನಿನ್ನ
ಬೇಡುವೆವು ಕಾರ್ಯಗಳ ವೃದ್ಧಿಗಾಗಿ
ವಿಶ್ವಂಭರನೆ ಸತ್ಯಕರ್ಮ ಕರುಣಿಸು ನಮ್ಮ
ಯಜ್ಞಹವಿಸುಗಳ ಸಂತುಷ್ಟಿಗಾಗಿ ||
(ಋಗ್ವೇದದ ೧೦ನೆ ಮಂಡಲ)
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...