Home / ಕವನ / ಕವಿತೆ / ವಿಶ್ವಕರ್ಮ ಸೂಕ್ತ

ವಿಶ್ವಕರ್ಮ ಸೂಕ್ತ

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು
ಹೋತಾರನಾಗಿ ಯಜ್ಞದಲಿ ಅರ್ಪಿಸಿದ
ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ
ಮೊದಲಿಗನು ತಾನಾಗಿ ಸೇರಿಹೋದ

ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು
ಯಾವುದದು ತಾನಿತ್ತು ಹೇಗೆ ಇತ್ತು
ವಿಶ್ವಚಕ್ಷುವು ವಿಶ್ವಕರ್ಮನಾ ಮಹಿಮೆಯದು
ಈ ಭೂಮಿಗಗನಗಳ ಸೃಷ್ಟಿಸಿತ್ತು

ವಿಶ್ವವೆಲ್ಲಾ ಕಣ್ಣು ವಿಶ್ವವೆಲ್ಲಾ ಬಾಯಿ
ವಿಶ್ವವೆಲ್ಲಾ ಬಾಹು ಪಾದವಿರುವ
ಹಕ್ಕಿ ರೆಕ್ಕೆಗಳಂತೆ ತೆಕ್ಕೆಯಲಿ ಆ ದೇವ
ಬಾನು ಭೂಮಿಗಳನ್ನು ನಿರ್ಮಿಸಿರುವ

ಯಾವ ವನವದು ಅಲ್ಲಿ ಯಾವ ವೃಕ್ಷವು ಇತ್ತು
ಎಲ್ಲಿ ಈ ಭೂ ಬಾನು ಅಡಗಿದ್ದವು
ಮತಿವಂತ ಮಾನವರೆ ಮನದೊಳಗೆ ಚಿಂತಿಸಿರಿ
ಯಾವುದದು ಭುವನವನು ಧರಿಸಿರುವುದು

ಮೇಲಿರುವುದೆಲ್ಲವೂ ಕೆಳಗಿರುವುದೆಲ್ಲವೂ
ನಡುವಿರುವುದೆಲ್ಲವೂ ನೀ ವಿಶ್ವಕರ್ಮ
ಹವಿಸ್ಸನರ್ಪಿಸುವುದನು ಕಲಿಸು ಗೆಳೆಯರಿಗೆಲ್ಲ
ತನ್ನ ಅರ್ಪಿಸಿ ತಾನು ವೃದ್ಧಿಸುವ ಮರ್ಮ

ವಿಶ್ಚಕರ್ಮನೆ ಸ್ವತಃ ಈ ಭೂಮಿ ಸ್ವರ್ಗಗಳ
ಯಜ್ಞದಲ್ಲಾಜ್ಯ ಮಾಡಿದ ಪರಿಯಲಿ
ಸುತ್ತಲಿನ ಜನ ಮರುಳುತನದಲ್ಲಿ ಮುಳುಗಿರಲಿ
ಇಹದಿ ಸಂಪದ ಜ್ಞಾನ ನಮಗಾಗಲಿ

ವೇಗಮತಿ ವಾಕ್ಪತಿಯೆ ವಿಶ್ಚಕರ್ಮನೆ ನಿನ್ನ
ಬೇಡುವೆವು ಕಾರ್ಯಗಳ ವೃದ್ಧಿಗಾಗಿ
ವಿಶ್ವಂಭರನೆ ಸತ್ಯಕರ್ಮ ಕರುಣಿಸು ನಮ್ಮ
ಯಜ್ಞಹವಿಸುಗಳ ಸಂತುಷ್ಟಿಗಾಗಿ ||
(ಋಗ್ವೇದದ ೧೦ನೆ ಮಂಡಲ)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...