Home / ಕವನ / ಕವಿತೆ / ವಿಶ್ವಕರ್ಮ ಸೂಕ್ತ

ವಿಶ್ವಕರ್ಮ ಸೂಕ್ತ

ಈ ಎಲ್ಲ ವಿಶ್ವವನು ನಮ್ಮ ತಂದೆಯು ಋಷಿಯು
ಹೋತಾರನಾಗಿ ಯಜ್ಞದಲಿ ಅರ್ಪಿಸಿದ
ಆಶಿಸಿದ ಸೃಷ್ಟಿಸಿದ ಈ ತನ್ನ ಆಸ್ತಿಯಲಿ
ಮೊದಲಿಗನು ತಾನಾಗಿ ಸೇರಿಹೋದ

ಸೃಷ್ಟಿಯಾರಂಭದಲಿ ಈ ವಿಶ್ವವೇನಿತ್ತು
ಯಾವುದದು ತಾನಿತ್ತು ಹೇಗೆ ಇತ್ತು
ವಿಶ್ವಚಕ್ಷುವು ವಿಶ್ವಕರ್ಮನಾ ಮಹಿಮೆಯದು
ಈ ಭೂಮಿಗಗನಗಳ ಸೃಷ್ಟಿಸಿತ್ತು

ವಿಶ್ವವೆಲ್ಲಾ ಕಣ್ಣು ವಿಶ್ವವೆಲ್ಲಾ ಬಾಯಿ
ವಿಶ್ವವೆಲ್ಲಾ ಬಾಹು ಪಾದವಿರುವ
ಹಕ್ಕಿ ರೆಕ್ಕೆಗಳಂತೆ ತೆಕ್ಕೆಯಲಿ ಆ ದೇವ
ಬಾನು ಭೂಮಿಗಳನ್ನು ನಿರ್ಮಿಸಿರುವ

ಯಾವ ವನವದು ಅಲ್ಲಿ ಯಾವ ವೃಕ್ಷವು ಇತ್ತು
ಎಲ್ಲಿ ಈ ಭೂ ಬಾನು ಅಡಗಿದ್ದವು
ಮತಿವಂತ ಮಾನವರೆ ಮನದೊಳಗೆ ಚಿಂತಿಸಿರಿ
ಯಾವುದದು ಭುವನವನು ಧರಿಸಿರುವುದು

ಮೇಲಿರುವುದೆಲ್ಲವೂ ಕೆಳಗಿರುವುದೆಲ್ಲವೂ
ನಡುವಿರುವುದೆಲ್ಲವೂ ನೀ ವಿಶ್ವಕರ್ಮ
ಹವಿಸ್ಸನರ್ಪಿಸುವುದನು ಕಲಿಸು ಗೆಳೆಯರಿಗೆಲ್ಲ
ತನ್ನ ಅರ್ಪಿಸಿ ತಾನು ವೃದ್ಧಿಸುವ ಮರ್ಮ

ವಿಶ್ಚಕರ್ಮನೆ ಸ್ವತಃ ಈ ಭೂಮಿ ಸ್ವರ್ಗಗಳ
ಯಜ್ಞದಲ್ಲಾಜ್ಯ ಮಾಡಿದ ಪರಿಯಲಿ
ಸುತ್ತಲಿನ ಜನ ಮರುಳುತನದಲ್ಲಿ ಮುಳುಗಿರಲಿ
ಇಹದಿ ಸಂಪದ ಜ್ಞಾನ ನಮಗಾಗಲಿ

ವೇಗಮತಿ ವಾಕ್ಪತಿಯೆ ವಿಶ್ಚಕರ್ಮನೆ ನಿನ್ನ
ಬೇಡುವೆವು ಕಾರ್ಯಗಳ ವೃದ್ಧಿಗಾಗಿ
ವಿಶ್ವಂಭರನೆ ಸತ್ಯಕರ್ಮ ಕರುಣಿಸು ನಮ್ಮ
ಯಜ್ಞಹವಿಸುಗಳ ಸಂತುಷ್ಟಿಗಾಗಿ ||
(ಋಗ್ವೇದದ ೧೦ನೆ ಮಂಡಲ)
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...