Home / ಕವನ / ಕವಿತೆ / ನಾವು ಮನುಜರು

ನಾವು ಮನುಜರು

ನಾವು ಸಾಮಾನ್ಯರು
ಕಡಿಯುತ್ತೇವೆ ಕುಡಿಯುತ್ತೇವೆ
ತಿನ್ನುತ್ತೇವೆ ಮಲಗುತ್ತೇವೆ
ಬಾಧೆಗಳಿಂದ ಮುಲುಗುತ್ತೇವೆ
ಹಸಿಯುತ್ತೇವೆ ಹುಸಿಯುತ್ತೇವೆ
ನುಸಿಯುತ್ತೇವೆ ಮಸೆಯುತ್ತೇವೆ
ಸಂದುಗಳಲ್ಲಿ ನುಸುಳುತ್ತೇವೆ
ಸಿಕ್ಕಷ್ಟು ಕಬಳಿಸುತ್ತೇವೆ
ಸಿಗಲಾರದ್ದಕ್ಕೆ ಹಳಹಳಿಸುತ್ತೇವೆ

ಕನಸುಗಳ ಹೆಣೆಯುತ್ತೇವೆ
ನನಸಾಗದೆ ದಣಿಯುತ್ತೇವೆ
ಪರದೆಗಳಲ್ಲಿ ಕುಣಿಯುತ್ತೇವೆ
ಕಾಣದುದರ ಬೆದರಿಕೆಗೆ ಮಣಿಯುತ್ತೇವೆ

ಹೊರಗೆ ಬಂದು ಬೀದಿಗಳಲ್ಲಿ
ನಿಸೂರಾಗಿ ನಡೆಯುತ್ತೇವೆ
ಗುಂಪಿನಲ್ಲಿ ಗೋವಿಂದಾ
ಸೀದಾ ಸಾದಾ ಸಾಚಾತನಗಳಿಗೆ
ನಾವೇ ಹಕ್ಕುದಾರರು
ನ್ಯಾಯ ನೀತಿ ಧರ್ಮಗಳಿಗೆ
ನಾವೇ ವಾರಸುದಾರರು
ಪೋಜು ಕೊಡುವ ಸರದಾರರು
ಪರರನ್ನು ಹೇಸುತ್ತೇವೆ
ಅಲ್ಲಿ ಇಲ್ಲಿ ಮೂಸುತ್ತೇವೆ
ಹಣಕ್ಕೆ ಹಡದಿ ಹಾಸುತ್ತೇವೆ
ಕಂಡವರ ಬೆಳೆಯ ಮೇಸುತ್ತೇವೆ
ಕಂಡು ಕೇಳಿದರೆ ಇಲ್ಲೆಂದು ವಾದಿಸುತ್ತೇವೆ
ರುಚಿಗಳನ್ನೇ ಬಯಸುತ್ತೇವೆ

ವಾಸನೆಗಳ ಹಿಂಬಾಲಿಸುತ್ತೇವೆ
ಕಡುಕೊಂಡು ಬಿದ್ದಾಗ ಹಲ್ಲು ಕಿಸಿಯುತ್ತೇವೆ
ಹೊರಳುತ್ತೇವೆ ನರಳುತ್ತೇವೆ

ಯಾರಿಗೆ ಬೇಕು ಕಷ್ಟ ನಷ್ಟ
ಸಾವು ನೋವು ಅನಿಷ್ಟ
ಅವುಗಳಿಂದ ದೂರ ಓಡುತ್ತೇವೆ
ಮೈ ಉಳಿಸಲು ಗೊಣಗಾಡುತ್ತೇವೆ
ಜೀವ ಉಳಿಸಲು ಹೆಣಗಾಡುತ್ತೇವೆ

ಚಟ ವ್ಯಸನಗಳು ನಮ್ಮ ಜೀವ ಬಂಧುಗಳು
ಅದಕ್ಕಾಗಿ ಬಿಟ್ಟೇವು ಜೀವ
ಸೋಮಾರಿತನ ಸುಳ್ಳು ತಗುಲುಗಳು
ನಮ್ಮ ಜಾಯಮಾನ
ಅದರಲ್ಲೇ ಸಾಗುತಿದೆ ದಿನಮಾನ

ಸಣ್ಣ ಸಣ್ಣದಕೆ ಸೆಣಸುತ್ತೇವೆ
ಕಚ್ಚಾಡುತ್ತೇವೆ ಬಡಿದಾಡುತ್ತೇವೆ
ನಾಯಿಗಳೂ ನಾಚುವಂತೆ
ಪುಕ್ಕಟೆ ಸಿಕ್ಕರೆ ಮುಕ್ಕುರುತ್ತೇವೆ
ಹರಕೊಂಡು ತಿನ್ನುತ್ತೇವೆ
ಕಾಗೆಗಳೂ ಬೆದರುವಂತೆ

ಏನೇನೂ ಕಿಸಿದಿಲ್ಲವಾದರೂ
ಮಾನ ಸನ್ಮಾನ ಪದವಿ ಪ್ರಶಸ್ತಿಗಳಿಗೆ
ಕೈ ಚಾಚುತ್ತೇವೆ ಬಾಚುತ್ತೇವೆ
ಪ್ರಚಾರ ನಮಗಲ್ಲದೆ ಇನ್ನಾರಿಗೆ
ಗೆದ್ದೆತ್ತಿನ ಬಾಲ ಹಿಡಿದು ಹಾಕಿ ಜೈಕಾರ
ಬೇಳೆ ಬೇಯಿಸಿಕೊಳ್ಳುತ್ತೇವೆ
ಗಾಳಿ ಬಂದಂತೆ ತೂರಿಕೊಳುತ್ತೇವೆ

ಹೆರರ ಚಪ್ಪರ ಉರಿಸಿ
ಮೈಕೈ ಕಾಯಿಸಿಕೊಳ್ಳುತ್ತೇವೆ
ಹೇಳುತ್ತಾ ಹೋದರೆ ನಮ್ಮ ಕಥನ
ಸಣ್ಣವು ಭಾರತ ರಾಮಾಯಣ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...