Home / ಕವನ / ಕವಿತೆ / ನಾವು ಮನುಜರು

ನಾವು ಮನುಜರು

ನಾವು ಸಾಮಾನ್ಯರು
ಕಡಿಯುತ್ತೇವೆ ಕುಡಿಯುತ್ತೇವೆ
ತಿನ್ನುತ್ತೇವೆ ಮಲಗುತ್ತೇವೆ
ಬಾಧೆಗಳಿಂದ ಮುಲುಗುತ್ತೇವೆ
ಹಸಿಯುತ್ತೇವೆ ಹುಸಿಯುತ್ತೇವೆ
ನುಸಿಯುತ್ತೇವೆ ಮಸೆಯುತ್ತೇವೆ
ಸಂದುಗಳಲ್ಲಿ ನುಸುಳುತ್ತೇವೆ
ಸಿಕ್ಕಷ್ಟು ಕಬಳಿಸುತ್ತೇವೆ
ಸಿಗಲಾರದ್ದಕ್ಕೆ ಹಳಹಳಿಸುತ್ತೇವೆ

ಕನಸುಗಳ ಹೆಣೆಯುತ್ತೇವೆ
ನನಸಾಗದೆ ದಣಿಯುತ್ತೇವೆ
ಪರದೆಗಳಲ್ಲಿ ಕುಣಿಯುತ್ತೇವೆ
ಕಾಣದುದರ ಬೆದರಿಕೆಗೆ ಮಣಿಯುತ್ತೇವೆ

ಹೊರಗೆ ಬಂದು ಬೀದಿಗಳಲ್ಲಿ
ನಿಸೂರಾಗಿ ನಡೆಯುತ್ತೇವೆ
ಗುಂಪಿನಲ್ಲಿ ಗೋವಿಂದಾ
ಸೀದಾ ಸಾದಾ ಸಾಚಾತನಗಳಿಗೆ
ನಾವೇ ಹಕ್ಕುದಾರರು
ನ್ಯಾಯ ನೀತಿ ಧರ್ಮಗಳಿಗೆ
ನಾವೇ ವಾರಸುದಾರರು
ಪೋಜು ಕೊಡುವ ಸರದಾರರು
ಪರರನ್ನು ಹೇಸುತ್ತೇವೆ
ಅಲ್ಲಿ ಇಲ್ಲಿ ಮೂಸುತ್ತೇವೆ
ಹಣಕ್ಕೆ ಹಡದಿ ಹಾಸುತ್ತೇವೆ
ಕಂಡವರ ಬೆಳೆಯ ಮೇಸುತ್ತೇವೆ
ಕಂಡು ಕೇಳಿದರೆ ಇಲ್ಲೆಂದು ವಾದಿಸುತ್ತೇವೆ
ರುಚಿಗಳನ್ನೇ ಬಯಸುತ್ತೇವೆ

ವಾಸನೆಗಳ ಹಿಂಬಾಲಿಸುತ್ತೇವೆ
ಕಡುಕೊಂಡು ಬಿದ್ದಾಗ ಹಲ್ಲು ಕಿಸಿಯುತ್ತೇವೆ
ಹೊರಳುತ್ತೇವೆ ನರಳುತ್ತೇವೆ

ಯಾರಿಗೆ ಬೇಕು ಕಷ್ಟ ನಷ್ಟ
ಸಾವು ನೋವು ಅನಿಷ್ಟ
ಅವುಗಳಿಂದ ದೂರ ಓಡುತ್ತೇವೆ
ಮೈ ಉಳಿಸಲು ಗೊಣಗಾಡುತ್ತೇವೆ
ಜೀವ ಉಳಿಸಲು ಹೆಣಗಾಡುತ್ತೇವೆ

ಚಟ ವ್ಯಸನಗಳು ನಮ್ಮ ಜೀವ ಬಂಧುಗಳು
ಅದಕ್ಕಾಗಿ ಬಿಟ್ಟೇವು ಜೀವ
ಸೋಮಾರಿತನ ಸುಳ್ಳು ತಗುಲುಗಳು
ನಮ್ಮ ಜಾಯಮಾನ
ಅದರಲ್ಲೇ ಸಾಗುತಿದೆ ದಿನಮಾನ

ಸಣ್ಣ ಸಣ್ಣದಕೆ ಸೆಣಸುತ್ತೇವೆ
ಕಚ್ಚಾಡುತ್ತೇವೆ ಬಡಿದಾಡುತ್ತೇವೆ
ನಾಯಿಗಳೂ ನಾಚುವಂತೆ
ಪುಕ್ಕಟೆ ಸಿಕ್ಕರೆ ಮುಕ್ಕುರುತ್ತೇವೆ
ಹರಕೊಂಡು ತಿನ್ನುತ್ತೇವೆ
ಕಾಗೆಗಳೂ ಬೆದರುವಂತೆ

ಏನೇನೂ ಕಿಸಿದಿಲ್ಲವಾದರೂ
ಮಾನ ಸನ್ಮಾನ ಪದವಿ ಪ್ರಶಸ್ತಿಗಳಿಗೆ
ಕೈ ಚಾಚುತ್ತೇವೆ ಬಾಚುತ್ತೇವೆ
ಪ್ರಚಾರ ನಮಗಲ್ಲದೆ ಇನ್ನಾರಿಗೆ
ಗೆದ್ದೆತ್ತಿನ ಬಾಲ ಹಿಡಿದು ಹಾಕಿ ಜೈಕಾರ
ಬೇಳೆ ಬೇಯಿಸಿಕೊಳ್ಳುತ್ತೇವೆ
ಗಾಳಿ ಬಂದಂತೆ ತೂರಿಕೊಳುತ್ತೇವೆ

ಹೆರರ ಚಪ್ಪರ ಉರಿಸಿ
ಮೈಕೈ ಕಾಯಿಸಿಕೊಳ್ಳುತ್ತೇವೆ
ಹೇಳುತ್ತಾ ಹೋದರೆ ನಮ್ಮ ಕಥನ
ಸಣ್ಣವು ಭಾರತ ರಾಮಾಯಣ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...