Home / ಕವನ / ಕವಿತೆ / ಸುವರ್ಣ ಸ್ವಾತಂತ್ರ್ಯ

ಸುವರ್ಣ ಸ್ವಾತಂತ್ರ್ಯ

ಭಾರತ ದೇಶದ ಸ್ವಾತಂತ್ರ್ಯೋತ್ಸವದ
ಸುವರ್ಣ ಹಬ್ಬವ ಮಾಡೋಣ
ಬನ್ನಿರಿ ಗೆಳೆಯರೆ ದೇಶ ಬಾಂಧವರೆ
ಸ್ವಾತಂತ್ರ್ಯವ ಕೊಂಡಾಡೋಣ

ತಿಲಕ್ ಗೋಖಲೆ ಮಹಾತ್ಮ ಗಾಂಧಿ
ಸುಭಾಷ್ ವಲ್ಲಭ ಜವಾಹರ
ಸಾವಿರ ಸಾವಿರ ದೇಶಭಕ್ತ ಜನ
ಹೋರಾಡುತ ಗಳಿಸಿದಾ ವರ

ಎಷ್ಟೋ ಜನ ಪ್ರಾಣಗಳನು ತೆತ್ತರೊ
ತಾಯಿಯ ಪಾದಕ್ಕೆ ನೈವೇದ್ಯ
ರಕ್ತದಿ ಬರೆದರೊ ತ್ಯಾಗದ ಕತೆಗಳ
ಎಲರಿಗೂ ವಂದನೆಯಾದ್ಯ

ಬ್ರಿಟಿಷರ ಬೂಟಿನ ತುಳಿತಕ್ಕೆ ಸಿಕ್ಕು
ಜೈಲಲಿ ಕೊಳೆತರೊ ಎಷ್ಟೊ ಜನಾ
ಹೆಂಡಿರು ಮಕ್ಕಳ ಮನೆಗಳ ತೊರೆದು
ನರಳಿ ಗೈದರೋ ಬಲಿದಾನ

ಅಂಥ ಎಲ್ಲ ಸ್ವಾತಂತ್ರ್ಯ ವೀರರಿಗೆ
ಅಶ್ರುತರ್ಪಣವ ಕೊಡಬೇಕು
ಅವರು ಕೊಟ್ಟ ಸ್ವಾತಂತ್ರ್ಯ ಸಂಪದವ
ಎಚ್ಚರದಲಿ ಬಳಸಲು ಬೇಕು

ಐವತ್ತು ವರುಷ ಬಂಗಾರ ಹರುಷ
ಕಳೆದುದು ಪಡೆದುದು ಏನೇನು
ಬಂಗಾರವೇನು ಬೆಳ್ಳಿಯೋ ಮಣ್ಣೋ
ಗಳಿಸಿದ್ದು ಸಾಧಿಸಿದ್ದೇನು
***

ಪ್ರತೀವರ್ಷವೂ ಮಾಡುತ ಬಂದೆವು
ಸ್ವಾತಂತ್ರ್ಯೋತ್ಸವ ಹಬ್ಬ
ಪ್ರತೀ ಸಾರಿಯು ವಿಷಾದದಿಂದಲೇ
ಕಂಡೆವು ಕವಿದಿಹ ಮಬ್ಬ

ಕಛೇರಿ ಶಾಲಾ ವಿದ್ಯಾಲಯಗಳು
ಮಕ್ಕಳ ಮೆರವಣಿಗೆಯಲಿ
ಧ್ವಜವ ಹಾರಿಸುವ ನಾಟಕ ಮಾಡುತ
ಕಳೆದೆವು ವರ್ಷಗಳಲ್ಲಿ

ಪ್ರತೀ ವರ್ಷವೂ ಕೇಳುತ ಬಂದೆವು
ಯಾರಿಗೆ ಬಂತೀ ಸ್ವಾತಂತ್ರ್ಯ
ದೀನ ದಲಿತರಿಗೆ ನೋವು ನರಳಿಕೆಯು
ಕೆಲವರಿಗಷ್ಟೇ ಸ್ವಾತಂತ್ರ್ಯ

ಘಟಸರ್ಪಗಳನು ಇಲಿ ಕಪ್ಪೆಗಳನು
ತೋಳಗಳನ್ನೂ ಕುರಿಗಳನು
ಒಂದೆ ಕೋಣೆಯಲಿ ಕೂಡಿ ಹಾಕಿದೊಲು
ಮಾಡಲು ಸ್ವತಂತ್ರ ದೇಶವನು

ಆಕಳು ಮೊಲಗಳ ಹುಲಿಸಿಂಹಗಳನು
ಒಂದೇ ಕಣದಲಿ ಹಾಕಿ
ಕೂಡಿ ಬಾಳಿ ಸಹ ಜೀವನ ಎನ್ನುತ
ತಂದರು ಸ್ವತಂತ್ರ ಬೆರಕಿ

ಕೋಟಿ ಕೋಟಿಗಳ ಕಬಳಿಸುವಂಥಾ
ಅಧಿಕೃತ ದರೋಡೆಯವರ
ಪ್ರಜಾರಾಜ್ಯವಿದು ಸೃಷ್ಟಿ ಮಾಡುತಿದೆ
ದೇಶ ಕೊಳ್ಳೆ ಹೊಡೆಯುವವರ

ಹಣವುಳ್ಳವರಿಗೆ ಸೇವೆಗೆ ನಿಂತಿವೆ
ಖಾಕೀ ಬಿಳಿ ಕರಿ ಡ್ರೆಸ್ಸು
ಹಣವಿಲ್ಲದವರ ಪಾಲಿಗೆ ಎಲ್ಲಾ
ಕಾನೂನ್ ವ್ಯವಸ್ಥೆ ಟಿಸ್ಸು

ಕಾಳಸಂತೆಗಳು ಕಪ್ಪು ದಂಧೆಗಳು
ರಾಜಾರೋಷದಿ ನಡೆದಾವೆ
ಗೂಂಡಾದಾದರು ರಾಜಕಾರಣವು
ಕೈಕೈ ಹಿಡಿದೇ ಸಾಗ್ಯಾವೆ

ಬಂಗಲೆ ಬಿಲ್ಡಿಂಗ್ ಬೆಳೆದೇ ಬೆಳೆದಿವೆ
ರಕ್ಕಸ ಬೊಜ್ಜಿನ ನಗರಗಳು
ಗೂಡೇ ಇಲ್ಲದೆ ಗೋಳಿಡುತ್ತಿದ್ದರು
ಬಡವರು ಕೊಚ್ಚೆಯ ಪ್ರಾಣಿಗಳು

ನೌಕರಿಗಳದೇ ಮಾರ್ಕೆಟ್ ಇರುವುದು
ಲಕ್ಷಲಕ್ಷಗಳ ವ್ಯಾಪಾರ
ಮದುವೆಯ ಮಾರ್ಕೆಟ್ ಮೆರೆಯುತ್ತಿರುವುದು
ಲಕ್ಷಗಳ ಬೆಲೆಯ ಗಂಡುವರ

ನೌಕರಿದಾರರ ಗುರಿಯು ಗಳಿಸುವುದು
ಅಪ್ರಮಾಣಿಕತೆ ದಾರಿ
ಎಷ್ಟೇ ಸುರಿದರೂ ಹೆಣ್ಣಿಗೆ ಉಳಿವುದು
ಹಿಂಸೆಯ ಬೆಂಕಿಯ ದಾರಿ

ಜಾತಿ ಧರ್ಮಗಳು ಮೌಢ್ಯಾಚಾರ
ಹಳೆಯ ಭೂತಗಳು ಬೆಳೆಯುತಿವೆ
ಹೊಸಯುಗದಿ ಹೊಸುತು ರೂಪವ ತಳೆದಿವೆ
ಜನಗಳ ಮತಿಯನು ಮಸಳಿಸಿವೆ

ಅಯೋಧ್ಯೆಯಲ್ಲೋ ಕಾಶ್ಮೀರದಲ್ಲೋ
ಕೆಂಪು ಚಿತ್ತಾರಗಳು ಬರೆದಾವೋ
ಬೊಂಬಾಯಿಯಲ್ಲೋ ಅಸ್ಸಾಮಿನಲ್ಲೋ
ಬಾಂಬು ರಂಗೋಲಿ ಹಾಕ್ಯಾವೋ

ಕೋಟಿ ಕೋಟಿಗಳ ಹಗರಣಗಳಲೂ
ದೇಶದ ಮುನ್ನಡೆ ಅಂತೀವೋ
ಸುವರ್ಣ ಸ್ವತಂತ್ರ ಭಾರತದಲ್ಲಿ
ತಿಪ್ಪೆಯ ಮ್ಯಾಲೇ ಕುಂತೀವೋ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...