ಸುವರ್ಣ ಸ್ವಾತಂತ್ರ್ಯ

ಭಾರತ ದೇಶದ ಸ್ವಾತಂತ್ರ್ಯೋತ್ಸವದ
ಸುವರ್ಣ ಹಬ್ಬವ ಮಾಡೋಣ
ಬನ್ನಿರಿ ಗೆಳೆಯರೆ ದೇಶ ಬಾಂಧವರೆ
ಸ್ವಾತಂತ್ರ್ಯವ ಕೊಂಡಾಡೋಣ

ತಿಲಕ್ ಗೋಖಲೆ ಮಹಾತ್ಮ ಗಾಂಧಿ
ಸುಭಾಷ್ ವಲ್ಲಭ ಜವಾಹರ
ಸಾವಿರ ಸಾವಿರ ದೇಶಭಕ್ತ ಜನ
ಹೋರಾಡುತ ಗಳಿಸಿದಾ ವರ

ಎಷ್ಟೋ ಜನ ಪ್ರಾಣಗಳನು ತೆತ್ತರೊ
ತಾಯಿಯ ಪಾದಕ್ಕೆ ನೈವೇದ್ಯ
ರಕ್ತದಿ ಬರೆದರೊ ತ್ಯಾಗದ ಕತೆಗಳ
ಎಲರಿಗೂ ವಂದನೆಯಾದ್ಯ

ಬ್ರಿಟಿಷರ ಬೂಟಿನ ತುಳಿತಕ್ಕೆ ಸಿಕ್ಕು
ಜೈಲಲಿ ಕೊಳೆತರೊ ಎಷ್ಟೊ ಜನಾ
ಹೆಂಡಿರು ಮಕ್ಕಳ ಮನೆಗಳ ತೊರೆದು
ನರಳಿ ಗೈದರೋ ಬಲಿದಾನ

ಅಂಥ ಎಲ್ಲ ಸ್ವಾತಂತ್ರ್ಯ ವೀರರಿಗೆ
ಅಶ್ರುತರ್ಪಣವ ಕೊಡಬೇಕು
ಅವರು ಕೊಟ್ಟ ಸ್ವಾತಂತ್ರ್ಯ ಸಂಪದವ
ಎಚ್ಚರದಲಿ ಬಳಸಲು ಬೇಕು

ಐವತ್ತು ವರುಷ ಬಂಗಾರ ಹರುಷ
ಕಳೆದುದು ಪಡೆದುದು ಏನೇನು
ಬಂಗಾರವೇನು ಬೆಳ್ಳಿಯೋ ಮಣ್ಣೋ
ಗಳಿಸಿದ್ದು ಸಾಧಿಸಿದ್ದೇನು
***

ಪ್ರತೀವರ್ಷವೂ ಮಾಡುತ ಬಂದೆವು
ಸ್ವಾತಂತ್ರ್ಯೋತ್ಸವ ಹಬ್ಬ
ಪ್ರತೀ ಸಾರಿಯು ವಿಷಾದದಿಂದಲೇ
ಕಂಡೆವು ಕವಿದಿಹ ಮಬ್ಬ

ಕಛೇರಿ ಶಾಲಾ ವಿದ್ಯಾಲಯಗಳು
ಮಕ್ಕಳ ಮೆರವಣಿಗೆಯಲಿ
ಧ್ವಜವ ಹಾರಿಸುವ ನಾಟಕ ಮಾಡುತ
ಕಳೆದೆವು ವರ್ಷಗಳಲ್ಲಿ

ಪ್ರತೀ ವರ್ಷವೂ ಕೇಳುತ ಬಂದೆವು
ಯಾರಿಗೆ ಬಂತೀ ಸ್ವಾತಂತ್ರ್ಯ
ದೀನ ದಲಿತರಿಗೆ ನೋವು ನರಳಿಕೆಯು
ಕೆಲವರಿಗಷ್ಟೇ ಸ್ವಾತಂತ್ರ್ಯ

ಘಟಸರ್ಪಗಳನು ಇಲಿ ಕಪ್ಪೆಗಳನು
ತೋಳಗಳನ್ನೂ ಕುರಿಗಳನು
ಒಂದೆ ಕೋಣೆಯಲಿ ಕೂಡಿ ಹಾಕಿದೊಲು
ಮಾಡಲು ಸ್ವತಂತ್ರ ದೇಶವನು

ಆಕಳು ಮೊಲಗಳ ಹುಲಿಸಿಂಹಗಳನು
ಒಂದೇ ಕಣದಲಿ ಹಾಕಿ
ಕೂಡಿ ಬಾಳಿ ಸಹ ಜೀವನ ಎನ್ನುತ
ತಂದರು ಸ್ವತಂತ್ರ ಬೆರಕಿ

ಕೋಟಿ ಕೋಟಿಗಳ ಕಬಳಿಸುವಂಥಾ
ಅಧಿಕೃತ ದರೋಡೆಯವರ
ಪ್ರಜಾರಾಜ್ಯವಿದು ಸೃಷ್ಟಿ ಮಾಡುತಿದೆ
ದೇಶ ಕೊಳ್ಳೆ ಹೊಡೆಯುವವರ

ಹಣವುಳ್ಳವರಿಗೆ ಸೇವೆಗೆ ನಿಂತಿವೆ
ಖಾಕೀ ಬಿಳಿ ಕರಿ ಡ್ರೆಸ್ಸು
ಹಣವಿಲ್ಲದವರ ಪಾಲಿಗೆ ಎಲ್ಲಾ
ಕಾನೂನ್ ವ್ಯವಸ್ಥೆ ಟಿಸ್ಸು

ಕಾಳಸಂತೆಗಳು ಕಪ್ಪು ದಂಧೆಗಳು
ರಾಜಾರೋಷದಿ ನಡೆದಾವೆ
ಗೂಂಡಾದಾದರು ರಾಜಕಾರಣವು
ಕೈಕೈ ಹಿಡಿದೇ ಸಾಗ್ಯಾವೆ

ಬಂಗಲೆ ಬಿಲ್ಡಿಂಗ್ ಬೆಳೆದೇ ಬೆಳೆದಿವೆ
ರಕ್ಕಸ ಬೊಜ್ಜಿನ ನಗರಗಳು
ಗೂಡೇ ಇಲ್ಲದೆ ಗೋಳಿಡುತ್ತಿದ್ದರು
ಬಡವರು ಕೊಚ್ಚೆಯ ಪ್ರಾಣಿಗಳು

ನೌಕರಿಗಳದೇ ಮಾರ್ಕೆಟ್ ಇರುವುದು
ಲಕ್ಷಲಕ್ಷಗಳ ವ್ಯಾಪಾರ
ಮದುವೆಯ ಮಾರ್ಕೆಟ್ ಮೆರೆಯುತ್ತಿರುವುದು
ಲಕ್ಷಗಳ ಬೆಲೆಯ ಗಂಡುವರ

ನೌಕರಿದಾರರ ಗುರಿಯು ಗಳಿಸುವುದು
ಅಪ್ರಮಾಣಿಕತೆ ದಾರಿ
ಎಷ್ಟೇ ಸುರಿದರೂ ಹೆಣ್ಣಿಗೆ ಉಳಿವುದು
ಹಿಂಸೆಯ ಬೆಂಕಿಯ ದಾರಿ

ಜಾತಿ ಧರ್ಮಗಳು ಮೌಢ್ಯಾಚಾರ
ಹಳೆಯ ಭೂತಗಳು ಬೆಳೆಯುತಿವೆ
ಹೊಸಯುಗದಿ ಹೊಸುತು ರೂಪವ ತಳೆದಿವೆ
ಜನಗಳ ಮತಿಯನು ಮಸಳಿಸಿವೆ

ಅಯೋಧ್ಯೆಯಲ್ಲೋ ಕಾಶ್ಮೀರದಲ್ಲೋ
ಕೆಂಪು ಚಿತ್ತಾರಗಳು ಬರೆದಾವೋ
ಬೊಂಬಾಯಿಯಲ್ಲೋ ಅಸ್ಸಾಮಿನಲ್ಲೋ
ಬಾಂಬು ರಂಗೋಲಿ ಹಾಕ್ಯಾವೋ

ಕೋಟಿ ಕೋಟಿಗಳ ಹಗರಣಗಳಲೂ
ದೇಶದ ಮುನ್ನಡೆ ಅಂತೀವೋ
ಸುವರ್ಣ ಸ್ವತಂತ್ರ ಭಾರತದಲ್ಲಿ
ತಿಪ್ಪೆಯ ಮ್ಯಾಲೇ ಕುಂತೀವೋ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಡುಗಿ
Next post ಅನುಭವಿಸಬೇಕು

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys