ರೊಕ್ಕದ ರೇಸು

ರೊಕ್ಕದ ರೇಸು ಹೊಂಟೈತೆ ತಗೊ
ಸಿಕ್ಕಿದ ದಾರಿಯೆ ಹಿಡಿದೈತೆ

ನನಗೇ ತನಗೇ ಎನ್ನುತ ನುಗ್ಗಿದೆ
ಬಾಚುತ ದೋಚುತ ಗಳಿಸುತ ಬಲಿಯುತ
ಓಡಲಾಗದೇ ಕಂಗೆಟ್ಟವರನು
ತೊತ್ತಳ ತುಳಿಯುತ ಸಾಗೈತೆ

ಹೊಟ್ಟೆಗಿಲ್ಲದೇ ಬಟ್ಟೆಗಿಲ್ಲದೇ
ಗೂಡು ಇಲ್ಲದೆ ಪಾಡು ಇಲ್ಲದೆ
ನರಳುವ ಮಂದಿ ಹೊರಳಾಡೈತೆ
ತುಳಿಯುವ ಕಾಲಾಗೆ ಬಿದ್ದೈತೆ

ರೊಕ್ಕದ ದಾರ್ಯಾಗೆ ಕರುಣೆಯು ಬತ್ತೈತೆ
ಹೃದಯವು ಕೊರಡೇ ಆಗೈತೆ
ಮಾನವೀಯತೆಯು ಕೊಳಚೆಯ ಸೇರಿದೆ
ಸವಕಲು ನಾಣ್ಯ ಆಗೈತೆ

ನ್ಯಾಯ ನೀತಿಗಳು ಪ್ರೀತಿ ಮಮತೆಗಳು
ಭಾವುಕ ಭ್ರಮೆಗಳ ಗೊಣಗಾಟ
ದೇಶ ಭಕ್ತಿಯೋ ಕವಿಗಳ ರೋಗ
ರೊಕ್ಕದ ಮುಂದೇ ಹುಡುಗಾಟ

ತಾಯಿಯೆ ಆಗಲಿ ತಂದೆಯೆ ಆಗಲಿ
ರೊಕ್ಕದ ಮುಂದೇ ಮುದಿಹದ್ದು
ಅಣ್ಣ ತಮ್ಮಂದಿರು ಅಕ್ಕ ತಂಗಿಯರು
ಮಾತಾಡಿಸಿದರೆ ವಿಷಮದ್ದು

ಸುತ್ತಲ ಜಗತ್ತು ಕಾಣದ ಹಾಂಗೆ
ಕುರುಡನ ಮಾಡುವುದೀ ರೊಕ್ಕ
ದೀನ ವಾಣಿಗಳು ಕೇಳಿಸದ್ಹಾಂಗೆ
ಕಿವುಡನ ಮಾಡುವುದೀ ರೊಕ್ಕ

ಕೋಮಲ ಭಾವನೆ ಮುಟ್ಟದ ಹಾಂಗೆ
ಕೊರಡುಗಟ್ಟಸುವುದೀ ರೂಕ್ಕ
ಎಲ್ಲರ ಸೌಖ್ಯದ ಆದರ್ಶಗಳನು
ತರಗೆಲೆ ಮಾಡುವುದೀ ರೊಕ್ಕ

ನೆಲೆಯೇ ಇಲ್ಲದವರೆಷ್ಟೇ ಇರಲಿ
ನನ್ನ ಸೈಟುಗಳೂರೂರಲ್ಲಿ
ಕಾಲಲ್ಲಿ ನಡೆವರ ಖರ್ಮಗಳಿರಲಿ
ಹಾರುವೆ ನಾ ಕಾರುಗಳಲ್ಲಿ

ಕಾಸಿಗು ಗತಿಯಿಲ್ಲದ ಕೋಟಿ ಜನ
ಕೋಟಿ ಕೋಟಿಗಳು ನನಗಿರಲಿ
ಚಳಿ ಬಿಸಿಲುಗಳಲ್ಲಿ ಒದ್ದಾಡುವ ಜನ
ಏರ್ ಕಂಡಿಷನ್ನು ಮನೆಯಿರಲಿ

ನೌಕರಿಗಾಗಿ ಲಕ್ಷ ಲಕ್ಷಗಳು
ಕೊಡುವೆನು ನನಗೇನಿಲ್ಲ ಭಯ
ವರದಕ್ಷಣೆಗೋ ಎಷ್ಟು ಲಕ್ಷಗಳು
ಕೇಳಲು ನಾಚಿಕೆ ಏಕಯ್ಯ

ಹರಕು ಬಟ್ಟೆಗಳ ಮಕ್ಕಳ ಮುಂದೆ
ನನ್ನ ಮಗಳ ಬರ್ಥ್‌ಡೇ ಪಾರ್ಟಿ
ವಿಧವಿಧ ತಿಂಡಿ ಷೋಕೀ ಮಂದೀ
ಕಣ್ಣುಕುಕ್ಕುಬೇಕು ಈಪಾಟಿ

ಊರಿಗೇ ಊರೇ ನಿಂತು ನೋಡುವುದು
ರೊಕ್ಕುಳ್ಳ ನಮ್ಮ ಮದುವೆಗಳ
ಸಾವಿರಗಟ್ಟಲೆ ತಿಂದೆಂಜಲದೆಲೆ
ಮುತ್ತಬೇಕು ತಿರುಕರ ಜಗಳ

ರೊಕ್ಕ ಮಾಡುವುದು ಒಂದೇ ಮಂತ್ರ
ರೊಕ್ಕ ಗಳಿಸುವುದೆ ನಮ ತಂತ್ರ
ರೊಕ್ಕವಿದ್ದವನೆ ಮನುಷ್ಯ ಲೋಕದಿ
ಇಲ್ಲದವನೆ ಹೆಣ ಅತಂತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೂಕು – ನುಗ್ಗಲು
Next post ನಕ್ಸಲ್ಲೈಟು

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys