Home / ಕವನ / ಕವಿತೆ / ರೊಕ್ಕದ ರೇಸು

ರೊಕ್ಕದ ರೇಸು

ರೊಕ್ಕದ ರೇಸು ಹೊಂಟೈತೆ ತಗೊ
ಸಿಕ್ಕಿದ ದಾರಿಯೆ ಹಿಡಿದೈತೆ

ನನಗೇ ತನಗೇ ಎನ್ನುತ ನುಗ್ಗಿದೆ
ಬಾಚುತ ದೋಚುತ ಗಳಿಸುತ ಬಲಿಯುತ
ಓಡಲಾಗದೇ ಕಂಗೆಟ್ಟವರನು
ತೊತ್ತಳ ತುಳಿಯುತ ಸಾಗೈತೆ

ಹೊಟ್ಟೆಗಿಲ್ಲದೇ ಬಟ್ಟೆಗಿಲ್ಲದೇ
ಗೂಡು ಇಲ್ಲದೆ ಪಾಡು ಇಲ್ಲದೆ
ನರಳುವ ಮಂದಿ ಹೊರಳಾಡೈತೆ
ತುಳಿಯುವ ಕಾಲಾಗೆ ಬಿದ್ದೈತೆ

ರೊಕ್ಕದ ದಾರ್ಯಾಗೆ ಕರುಣೆಯು ಬತ್ತೈತೆ
ಹೃದಯವು ಕೊರಡೇ ಆಗೈತೆ
ಮಾನವೀಯತೆಯು ಕೊಳಚೆಯ ಸೇರಿದೆ
ಸವಕಲು ನಾಣ್ಯ ಆಗೈತೆ

ನ್ಯಾಯ ನೀತಿಗಳು ಪ್ರೀತಿ ಮಮತೆಗಳು
ಭಾವುಕ ಭ್ರಮೆಗಳ ಗೊಣಗಾಟ
ದೇಶ ಭಕ್ತಿಯೋ ಕವಿಗಳ ರೋಗ
ರೊಕ್ಕದ ಮುಂದೇ ಹುಡುಗಾಟ

ತಾಯಿಯೆ ಆಗಲಿ ತಂದೆಯೆ ಆಗಲಿ
ರೊಕ್ಕದ ಮುಂದೇ ಮುದಿಹದ್ದು
ಅಣ್ಣ ತಮ್ಮಂದಿರು ಅಕ್ಕ ತಂಗಿಯರು
ಮಾತಾಡಿಸಿದರೆ ವಿಷಮದ್ದು

ಸುತ್ತಲ ಜಗತ್ತು ಕಾಣದ ಹಾಂಗೆ
ಕುರುಡನ ಮಾಡುವುದೀ ರೊಕ್ಕ
ದೀನ ವಾಣಿಗಳು ಕೇಳಿಸದ್ಹಾಂಗೆ
ಕಿವುಡನ ಮಾಡುವುದೀ ರೊಕ್ಕ

ಕೋಮಲ ಭಾವನೆ ಮುಟ್ಟದ ಹಾಂಗೆ
ಕೊರಡುಗಟ್ಟಸುವುದೀ ರೂಕ್ಕ
ಎಲ್ಲರ ಸೌಖ್ಯದ ಆದರ್ಶಗಳನು
ತರಗೆಲೆ ಮಾಡುವುದೀ ರೊಕ್ಕ

ನೆಲೆಯೇ ಇಲ್ಲದವರೆಷ್ಟೇ ಇರಲಿ
ನನ್ನ ಸೈಟುಗಳೂರೂರಲ್ಲಿ
ಕಾಲಲ್ಲಿ ನಡೆವರ ಖರ್ಮಗಳಿರಲಿ
ಹಾರುವೆ ನಾ ಕಾರುಗಳಲ್ಲಿ

ಕಾಸಿಗು ಗತಿಯಿಲ್ಲದ ಕೋಟಿ ಜನ
ಕೋಟಿ ಕೋಟಿಗಳು ನನಗಿರಲಿ
ಚಳಿ ಬಿಸಿಲುಗಳಲ್ಲಿ ಒದ್ದಾಡುವ ಜನ
ಏರ್ ಕಂಡಿಷನ್ನು ಮನೆಯಿರಲಿ

ನೌಕರಿಗಾಗಿ ಲಕ್ಷ ಲಕ್ಷಗಳು
ಕೊಡುವೆನು ನನಗೇನಿಲ್ಲ ಭಯ
ವರದಕ್ಷಣೆಗೋ ಎಷ್ಟು ಲಕ್ಷಗಳು
ಕೇಳಲು ನಾಚಿಕೆ ಏಕಯ್ಯ

ಹರಕು ಬಟ್ಟೆಗಳ ಮಕ್ಕಳ ಮುಂದೆ
ನನ್ನ ಮಗಳ ಬರ್ಥ್‌ಡೇ ಪಾರ್ಟಿ
ವಿಧವಿಧ ತಿಂಡಿ ಷೋಕೀ ಮಂದೀ
ಕಣ್ಣುಕುಕ್ಕುಬೇಕು ಈಪಾಟಿ

ಊರಿಗೇ ಊರೇ ನಿಂತು ನೋಡುವುದು
ರೊಕ್ಕುಳ್ಳ ನಮ್ಮ ಮದುವೆಗಳ
ಸಾವಿರಗಟ್ಟಲೆ ತಿಂದೆಂಜಲದೆಲೆ
ಮುತ್ತಬೇಕು ತಿರುಕರ ಜಗಳ

ರೊಕ್ಕ ಮಾಡುವುದು ಒಂದೇ ಮಂತ್ರ
ರೊಕ್ಕ ಗಳಿಸುವುದೆ ನಮ ತಂತ್ರ
ರೊಕ್ಕವಿದ್ದವನೆ ಮನುಷ್ಯ ಲೋಕದಿ
ಇಲ್ಲದವನೆ ಹೆಣ ಅತಂತ್ರ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...