Home / ಕವನ / ಕವಿತೆ / ರಾಜಮಾರ್ಗ, ಒಳಮಾರ್ಗ

ರಾಜಮಾರ್ಗ, ಒಳಮಾರ್ಗ

ರಾಜಮಾರ್ಗಗಳಿರುವುದು ವೇಗವಾದ ವಾಹನಗಳಿಗೆ
ಒಳಮಾರ್ಗಗಳಿರುವುದು ಎತ್ತಿನ ಗಾಡಿಗಳಿಗೆ ನಗ್ನಪಾದಗಳಿಗೆ
ರಾಜಮಾರ್ಗಗಳು ರಾಜಕೀಯ ಕೆಲಸಗಾರರಿಗೆ
ಒಳಮಾರ್ಗಗಳು ಅ-ರಾಜಕೀಯರಾದ ಜನಗಳಿಗೆ
ಬಹು ಉದ್ದೇಶಪೂರ್ಣವಾದುವು ರಾಜಮಾರ್ಗಗಳು
ಉದ್ದೇಶರಹಿತವಾಗಿ ಬಿದ್ದಿರುವುವು ಒಳಮಾರ್ಗಗಳು
ರಾಜಧಾನಿಗೆ ಹೋಗುವುವು ರಾಜಮಾರ್ಗಗಳು
ಹೊರಟಲ್ಲಿಗೇ ಹೊರಡುವುವು ಒಳಮಾರ್ಗಗಳು
ರಾಜಮಾರ್ಗಗಳು ಬಹಳ ಶುಚಿಯಾಗಿರುತ್ತವೆ
ಒಳಮಾರ್ಗಗಳು ಧೂಳಿನಿಂದ ತುಂಬಿರುತ್ತವೆ
ಅವು ಪೊದೆಗಿಡಗಳ ನಡುವೆ ಮರೆಯಾಗುತ್ತವೆ

ಇಂಥ ಒಳಮಾರ್ಗದಲ್ಲಿ ನಾನು ಕೆರೆಗಳನ್ನು ಕಂಡೆ
ಕೆರೆಯೇರಿಯಲ್ಲಿ ಕುಳಿತ ಕಪ್ಪೆಗಳನ್ನು ಕಂಡೆ
ಅವು ಮೋಡಗಳನ್ನು ಕರೆಯುವುದನ್ನು ಕಂಡೆ
ಮೋಡಗಳ ನೆರಳು ಸರಿಯುವುದನ್ನು ಕಂಡೆ
ಸೂರ್ಯಕಾಂತಿ ಹೂ ತಿರುಗುವುದನ್ನು ಕಂಡೆ
ಹೊನ್ನೆಮರಗಳ ತುಂಬ ಮಿಂಚುಗಳನ್ನು ಕಂಡೆ
ಗೋರಿಗಳ ಮೇಲೆ ಹುಲ್ಲು ಬೆಳೆಯುವುದನ್ನು ಕಂಡೆ
ಆದ್ದರಿಂದ ಇನ್ನೆಂದಿಗೂ ರಾಜಮಾರ್ಗವನ್ನು
ಸೇರದವನಾಗಿದ್ದೇನೆ. ಆದರೂ ಚಳಿಗಾಲದ
ಮುಂಜಾವಗಳಲ್ಲಿ ಕೇಳಿಸುತ್ತದೆ ಕೆಲವೊಮ್ಮೆ
ರಾಜಧಾನಿಗೆ ಹಾಯುವ ವಾಹನಗಳ ಸದ್ದು-ನನಗೂ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...