ವಿಧಿ

ಹೇಳಿರಲಿಲ್ಲಿವೆ ನಾನು ನಿಮಗೆ
ಅವನಿರುವುದೆ ಹಾಗೆ
ಅವನ ಕೆಣಕಬೇಡಿರಿ ಎಂದು

ಅವನೇನು ಹುಚ್ಚನಲ್ಲ ಹೆಡ್ಡನೂ ಅಲ್ಲ
ಪ್ರೀತಿಯ ನೆಪದಲ್ಲಿ
ತಲೆ ಸಡಿಲಾದವನಲ್ಲ
ವಂಶಪಾರಂಪರ್ಯವಲ್ಲ
ಅವನ ಪೂರ್ವಜರಲ್ಲಿ
ಹೀಗೆ ಯಾರಿಗೂ ಇದ್ದಿರಲಿಲ್ಲ
ಅವನಷ್ಟಕ್ಕೆ ಬಿಟ್ಟರೆ ಅವನು
ಯಾರಿಗೇನೂ ಮಾಡುವುದಿಲ್ಲ

ಮಾತು ಬಯ್ಗಳದಂತೆ
ನಿಮಗೆ ಅನ್ನಿಸಬಹುದು
ಅವನ ರೀತಿ ಬೇರೆ-
ಪದಗಳನ್ನು ಹಣ್ಣಿನಂತೆ
ಕಚ್ಚುತ್ತಾನೆ
ಕಲ್ಲಿನಂತೆ ಎಸೆಯುತ್ತಾನೆ
ಜಗಲಿಯಲ್ಲಿ ಕುಳಿತು ವಾಕ್ಯಗಳನ್ನು
ನೂಲಿನಂತೆ ನೇಯುತ್ತಾನೆ
ಬೀಡಿಯ ಹೊಗೆಯಂತೆ
ಉಗುಳುತ್ತಾನೆ ಅರ್ಥದ
ದಟ್ಟ ಮೋಡಗಳನ್ನು

ದೇಶವಿದೇಶ ಸುತ್ತಿದವನಲ್ಲ
ಬಿಹಾರ ಬಂಗಾಳ ಒರಿಸ್ಸ
ಕಾಶ್ಮೀರ ಹಿಮಾಚಲಪ್ರದೇಶ
ಪಂಜಾಬ ಗುಜಾರಾತ ಮರಾಠ
ಎಲ್ಲಿಗೂ ಹೋಗಿಲ್ಲ
ಬೆಲ್ಚಿ ಭೋಪಾಲ ಭಾಗಲ್ಪುರ
ಮೀನಾಕ್ಷಿಪುರ ಕಾಮಾಟಿಪುರ ತಿರುವನಂತಪುರ
ಚಾರ್ಮಿನಾರ್ ಕುತುಬ್‌ಮಿನಾರ್ ಶ್ರವಣಬೆಳಗೂಳ
ಹಳದೀಘಾಟ ರಾಜಘಾಟ ತಾಳೀಕೊಟೆ
ಜಲಿಯನ್‌ವಾಲಾಬಾಗ್
ನೋಡಿದವನಲ್ಲ
ಗಾಂಧಿ ನೆಹರು ಪಟೇಲ ಜಿನ್ನ
ಶೇಖ್‌ಅಬ್ದುಲ್ಲ ಇಂದಿರಾಗಾಂಧಿ ಸಂಜಯಗಾಂಧಿ
ಫೂಲನ್ ದೇವಿ ಹಾಜಿಮಸ್ತಾನ
ಮೊರಾರ್ಜಿ ದೇಸಾಯಿ ಕಾಂತಿದೇಸಾಯಿ ವಾಜಪೇಯಿ
ಅಕ್ಬರ್ ಆಶೋಕ ತುಘಲಕ
ಚರಣ್‌ಸಿಂಗ್ ಸ್ವರಣ್‌ಸಿಂಗ್ ಭಿಂದ್ರಾನ್‌ವಾಲೆ
ರಾಜನಾರಾಯಣ್ ಅಮಜದ್‌ಖಾನ್
ಖಾನ್ ಅಬ್ದುಲ್ ಗಫಾರ್‌ಖಾನ್
ಡಾಕ್ಟರ್ ರಾಮ ಮನೋಹರ ಲೋಹಿಯಾ
ಯಾರನ್ನೂ ಕಂಡವನಲ್ಲ
ಆದರೂ ಅವನು ಹೇಳುವುದರಲ್ಲಿ ಸುಳ್ಳಿಲ್ಲ
ಎಲ್ಲ ಕಡೆ ಹೋಗಿದ್ದಾನೆ
ಎಲ್ಲ ನೋಡಿದ್ದಾನೆ
ಎಲ್ಲ ಕಂಡಿದ್ದಾನೆ

ಯಾರು ನಂಬಿದರೆಷ್ಟು ಬಿಟ್ಟರೆಷ್ಟು
ಮಹಾತ್ಮಾ ಗಾಂಧಿ ತಾನೇ ಎಂದು
ಕಿತ್ತೊಗೆದಿದ್ದನು ಅಂಗಿಯನ್ನು
ದಂಡಿಯಾತ್ರೆ ಕೈಗೊಳ್ಳುವೆನೆಂದು
ನಡೆದು ಹೋಗಿದ್ದನು ಕುಂಬಳೆಗೆ
ಅದೆಷ್ಟೋ ಬಾರಿ ಅನ್ನನೀರು ಬಿಟ್ಟು
ಉಪವಾಸ ಮಲಗಿದ್ದನು
ಗಾಂಧಿಯ ಕೊಲೆಯಾದಂದು
ತಾನೇ ಸತ್ತ ಎಂದುಕೊಂಡಿದ್ದನು
ನಂತರ ನಾಥೂರಾಮ್ ಗೋಡ್ಸೆಯನ್ನು
ಗಲ್ಲಿಗೇರಿಸಿದಾಗ
ತಲೆಬಾಗಿಸಿ ನಿಂತವನು ಇವನೇ!

ಕೊಲೆ ಸುಲಿಗೆ ಅತ್ಯಾಚಾರ ಅಹಿಂಸೆ
ಕ್ಷಾಮ ದಾಮರ ರೋಗ ರುಜಿನು ಮಹಾಯುದ್ಧ
ಎಲ್ಲ ವಿಧಿಗೂ ಬದ್ಧ
ನಡು ಮಧ್ಯಾಹ್ನದ ಸೂರ್ಯನನ್ನು
ಬಿಡುಗಣ್ಣಿನಿಂದ ನೋಡಿ ನಿಲ್ಲುವನು
ಎಂಥ ಸತ್ಯಕ್ಕೂ ಸಿದ್ಧ
ಆದರೂ ಯಾವ ದೇಶ ತಾನೆ
ಇಬ್ಬರು ಸೂರ್ಯರನ್ನು ಸಹಿಸುವುದು?
ಇವನು ಈಗಾಗಲೆ
ಅಂಧನಾಗತೊಡಗಿದ್ದಾನೆ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾರುಡಿ
Next post ಜೇನು – ಸಕ್ಕರೆ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

cheap jordans|wholesale air max|wholesale jordans|wholesale jewelry|wholesale jerseys