ಗ್ರಾಮ ಒಂದು ಭೇಟಿ

ಯಾರಿಗೆ ಯಾರು ಬರಕೊಟ್ವ ಉಂಬಳಿ
ಈ ಗದ್ದೆ ಬಯಲು ಮನೆ ಮಠ
ಅ ಮುದುಕ ಹೊದ್ಡ ಕಂಬಳಿ ?

ಎರಡು ತಲೆಮಾರಿಗಿಂತ
ಹಿ೦ದಿಲ್ಲದ ಇತಿಹಾಸ
ಆದರೂ ಗುಡ್ಡದ ಕೆಂಗಣ್ಣ ದೇವತೆ
ಎಲ್ಲವನ್ನೂ ನೊಡಿದೆ

ಪಶ್ಚಿಮದ ಆಕಾಶ ರೇಖೆ
ಅರಬೀ ಸಮುದ್ರದ ಅಂಚು
ಈಚೆಗೆ ಘಟ್ಟಗಳ ಸಾಲು

ತಪ್ಪಲಿನ ಹುಲ್ಲು
ಹೊಂಬಣ್ಣಕ್ಕೆ ತಿರುಗುವ ನೀರವದಲ್ಲಿ
ಸಮಳಿಸಿದ್ದೇನೆ ನಾನು ಅನಿರೀಕ್ಷಿತ

ಧೂಳು ತುಂಬಿದ
ಒಂದೇ ಒ೦ದು ಮಾರ್ಗದಲ್ಲಿ
ಹೋದವರಾರು
ಬಂದವರಾರು
ಎಂಬುದು ಅಸಂಗತ

ಬಯಲ ನಡುವೆ ನಿಂತು
ಕಲ್ಪಿಸುವೆನು ನಾನು
ನನ್ನ ಪೂರ್ವಜರು ನಡೆದ
ಕೆಂಪು ಮಣ್ಣಿನ ದಾರಿ
ಕಾಯುವುದು ನನ್ನ ಸರದಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಣಕದಿರಿ ಕವಿಯ
Next post ಪ್ರೇಮೋನ್ಮಾದ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…