ಕುಂಬಳೆಯ ನಿಲ್ದಾಣ

ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ದದೇನಲ್ಲ
ಮದರಾಸು ಮೈಲು ಜಯಂತಿ ಜನತಾ ಅಲ್ಲಿ ನಿಲ್ಲುವು-
ದಿಲ್ಲ. ಇತರ ಗಾಡಿಗಳು ತುಸು ಹೊತ್ತು ತಂಗುವುವು
ಜನ ಇಳಿಯುವರು ಹತ್ತುವರು ಎಲ್ಲಿಂದೆಲ್ಲಿಗೊ
ಹೋಗುವರು ಕಣ್ಣು ತೆರೆಯುವುದರೊಳಗೆ

ಐನೂರು ವರ್ಷದ ಆಲದ ಮರಗಳಿವೆ ಅಲ್ಲಿ
ಬಿಳಲುಗಳು ಬೆಳೆದು ಬೇರುಗಳಾಗಿವೆ ಅವುಗಳ
ನೆರಳಲ್ಲಿ ದನಗಳು ಮಲಗಿ ಮೆಲಕುಹಾಕುತ್ತವೆ
ಪ್ರಯಾಣಿಕರು ಕುಳಿತು ಗಾಡಿಗೆ ಕಾಯುತ್ತಾರೆ
ಮೇಲೆ ಹಕ್ಕಿಗಳು ಹಣ್ಣುಗಳನ್ನು ಹೆಕ್ಕುತ್ತವೆ-ಆಚೆ
ಅರಬೀಸಮುದ್ರ ಬಿದ್ದು ಹೊರಳುತ್ತದೆ

ಊರಿಗೆ ಹೊಸಬನಂತಿರುವ ಯಾತ್ರಿಕನೆ!
ಎಲ್ಲಿಂದ ಬಂದಿಳಿದೆ ನೀನು ಇಂಥ ಹೊತ್ತಿನಲ್ಲಿ
ಎತ್ತ ಹೋಗುವವ ಯಾರಲ್ಲಿ ಕೆಲಸ? ಅಹಾ!
ಅಲ್ಲಿ ಬಚ್ಚಂಗಾಯಿ ಕೊರೆದಿಟ್ಟು ಗಿರಾಕಿಗಳ
ಕಾಯುವ ಮುದುಕನ ಬಳಿ ಸಾಗು!
ಅವನಿಗೆಲ್ಲವೂ ಗೊತ್ತು ಐನೂರು ವರ್ಷಗಳಿಂದ
ಹೀಗೆ ಕಾಯುತ್ತ ಕುಳಿತಿದ್ದಾನೆ! ಅವನ ಕಣ್ಣುಗಳಲ್ಲಿ
ಕಣ್ಣಿಟ್ಟು ನೋಡಿದರೆ ಎಲ್ಲ ಕಾಣಿಸುವುದು!
ಊರು ಮನೆ ಮಠ ಬಿಸಿಲು ಮಳೆಗಾಳಿ
ಮಾಗಿಯ ಚಳಿ ಊರದೇವರ ತೇರು ಯಾರಿಗೂ
ಹೇಳದೆ ಓಡಿಹೋದ ಜೋಡಿ ಕಾರಣವಿರದೆ
ಮಾಡಿದ ಆತ್ಮಹತ್ಯೆ ಎಷ್ಟು ಗಾಲಿಗಳು ಉರುಳಿ
ಹೋದುವು ಎಷ್ಟೊಂದು ಸರ್ತಿ ಎಷ್ಟು ಬೆಂಕಿಯ
ಕಣಗಳು ಸಿಡಿದುವು ಇವನ ಕಣ್ಣುಗಳಲ್ಲಿ!

ಅದೊ ಅದೋ ಸಮೀಪಿಸುವ ಅದೆಂಥ ಸದ್ದು ?
ಇನ್ನೊಂದು ಲೋಕದಿಂದೆದ್ದು ಬಂದಂತಿದೆ!
ಭೀತನಾಗದಿರು! ಅದು ಇನ್ನೊಂದು ಗಾಡಿ
ತುಸು ಹೊತ್ತು, ನಿಂತು ಹೋಗುವುದು, ಆಮೇಲೆ
ಎಲ್ಲ ಮೊದಲಿನಂತಾಗುವುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆನ್ನೆಗಳ ಗಂಟು
Next post ಸತ್ಯನಾರಾಯಣ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…