Home / ಕವನ / ಕವಿತೆ / ಕುಂಬಳೆಯ ನಿಲ್ದಾಣ

ಕುಂಬಳೆಯ ನಿಲ್ದಾಣ

ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ದದೇನಲ್ಲ
ಮದರಾಸು ಮೈಲು ಜಯಂತಿ ಜನತಾ ಅಲ್ಲಿ ನಿಲ್ಲುವು-
ದಿಲ್ಲ. ಇತರ ಗಾಡಿಗಳು ತುಸು ಹೊತ್ತು ತಂಗುವುವು
ಜನ ಇಳಿಯುವರು ಹತ್ತುವರು ಎಲ್ಲಿಂದೆಲ್ಲಿಗೊ
ಹೋಗುವರು ಕಣ್ಣು ತೆರೆಯುವುದರೊಳಗೆ

ಐನೂರು ವರ್ಷದ ಆಲದ ಮರಗಳಿವೆ ಅಲ್ಲಿ
ಬಿಳಲುಗಳು ಬೆಳೆದು ಬೇರುಗಳಾಗಿವೆ ಅವುಗಳ
ನೆರಳಲ್ಲಿ ದನಗಳು ಮಲಗಿ ಮೆಲಕುಹಾಕುತ್ತವೆ
ಪ್ರಯಾಣಿಕರು ಕುಳಿತು ಗಾಡಿಗೆ ಕಾಯುತ್ತಾರೆ
ಮೇಲೆ ಹಕ್ಕಿಗಳು ಹಣ್ಣುಗಳನ್ನು ಹೆಕ್ಕುತ್ತವೆ-ಆಚೆ
ಅರಬೀಸಮುದ್ರ ಬಿದ್ದು ಹೊರಳುತ್ತದೆ

ಊರಿಗೆ ಹೊಸಬನಂತಿರುವ ಯಾತ್ರಿಕನೆ!
ಎಲ್ಲಿಂದ ಬಂದಿಳಿದೆ ನೀನು ಇಂಥ ಹೊತ್ತಿನಲ್ಲಿ
ಎತ್ತ ಹೋಗುವವ ಯಾರಲ್ಲಿ ಕೆಲಸ? ಅಹಾ!
ಅಲ್ಲಿ ಬಚ್ಚಂಗಾಯಿ ಕೊರೆದಿಟ್ಟು ಗಿರಾಕಿಗಳ
ಕಾಯುವ ಮುದುಕನ ಬಳಿ ಸಾಗು!
ಅವನಿಗೆಲ್ಲವೂ ಗೊತ್ತು ಐನೂರು ವರ್ಷಗಳಿಂದ
ಹೀಗೆ ಕಾಯುತ್ತ ಕುಳಿತಿದ್ದಾನೆ! ಅವನ ಕಣ್ಣುಗಳಲ್ಲಿ
ಕಣ್ಣಿಟ್ಟು ನೋಡಿದರೆ ಎಲ್ಲ ಕಾಣಿಸುವುದು!
ಊರು ಮನೆ ಮಠ ಬಿಸಿಲು ಮಳೆಗಾಳಿ
ಮಾಗಿಯ ಚಳಿ ಊರದೇವರ ತೇರು ಯಾರಿಗೂ
ಹೇಳದೆ ಓಡಿಹೋದ ಜೋಡಿ ಕಾರಣವಿರದೆ
ಮಾಡಿದ ಆತ್ಮಹತ್ಯೆ ಎಷ್ಟು ಗಾಲಿಗಳು ಉರುಳಿ
ಹೋದುವು ಎಷ್ಟೊಂದು ಸರ್ತಿ ಎಷ್ಟು ಬೆಂಕಿಯ
ಕಣಗಳು ಸಿಡಿದುವು ಇವನ ಕಣ್ಣುಗಳಲ್ಲಿ!

ಅದೊ ಅದೋ ಸಮೀಪಿಸುವ ಅದೆಂಥ ಸದ್ದು ?
ಇನ್ನೊಂದು ಲೋಕದಿಂದೆದ್ದು ಬಂದಂತಿದೆ!
ಭೀತನಾಗದಿರು! ಅದು ಇನ್ನೊಂದು ಗಾಡಿ
ತುಸು ಹೊತ್ತು, ನಿಂತು ಹೋಗುವುದು, ಆಮೇಲೆ
ಎಲ್ಲ ಮೊದಲಿನಂತಾಗುವುದು
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...