Home / ಕವನ / ಕವಿತೆ / ಕುಂಬಳೆಯ ನಿಲ್ದಾಣ

ಕುಂಬಳೆಯ ನಿಲ್ದಾಣ

ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ದದೇನಲ್ಲ
ಮದರಾಸು ಮೈಲು ಜಯಂತಿ ಜನತಾ ಅಲ್ಲಿ ನಿಲ್ಲುವು-
ದಿಲ್ಲ. ಇತರ ಗಾಡಿಗಳು ತುಸು ಹೊತ್ತು ತಂಗುವುವು
ಜನ ಇಳಿಯುವರು ಹತ್ತುವರು ಎಲ್ಲಿಂದೆಲ್ಲಿಗೊ
ಹೋಗುವರು ಕಣ್ಣು ತೆರೆಯುವುದರೊಳಗೆ

ಐನೂರು ವರ್ಷದ ಆಲದ ಮರಗಳಿವೆ ಅಲ್ಲಿ
ಬಿಳಲುಗಳು ಬೆಳೆದು ಬೇರುಗಳಾಗಿವೆ ಅವುಗಳ
ನೆರಳಲ್ಲಿ ದನಗಳು ಮಲಗಿ ಮೆಲಕುಹಾಕುತ್ತವೆ
ಪ್ರಯಾಣಿಕರು ಕುಳಿತು ಗಾಡಿಗೆ ಕಾಯುತ್ತಾರೆ
ಮೇಲೆ ಹಕ್ಕಿಗಳು ಹಣ್ಣುಗಳನ್ನು ಹೆಕ್ಕುತ್ತವೆ-ಆಚೆ
ಅರಬೀಸಮುದ್ರ ಬಿದ್ದು ಹೊರಳುತ್ತದೆ

ಊರಿಗೆ ಹೊಸಬನಂತಿರುವ ಯಾತ್ರಿಕನೆ!
ಎಲ್ಲಿಂದ ಬಂದಿಳಿದೆ ನೀನು ಇಂಥ ಹೊತ್ತಿನಲ್ಲಿ
ಎತ್ತ ಹೋಗುವವ ಯಾರಲ್ಲಿ ಕೆಲಸ? ಅಹಾ!
ಅಲ್ಲಿ ಬಚ್ಚಂಗಾಯಿ ಕೊರೆದಿಟ್ಟು ಗಿರಾಕಿಗಳ
ಕಾಯುವ ಮುದುಕನ ಬಳಿ ಸಾಗು!
ಅವನಿಗೆಲ್ಲವೂ ಗೊತ್ತು ಐನೂರು ವರ್ಷಗಳಿಂದ
ಹೀಗೆ ಕಾಯುತ್ತ ಕುಳಿತಿದ್ದಾನೆ! ಅವನ ಕಣ್ಣುಗಳಲ್ಲಿ
ಕಣ್ಣಿಟ್ಟು ನೋಡಿದರೆ ಎಲ್ಲ ಕಾಣಿಸುವುದು!
ಊರು ಮನೆ ಮಠ ಬಿಸಿಲು ಮಳೆಗಾಳಿ
ಮಾಗಿಯ ಚಳಿ ಊರದೇವರ ತೇರು ಯಾರಿಗೂ
ಹೇಳದೆ ಓಡಿಹೋದ ಜೋಡಿ ಕಾರಣವಿರದೆ
ಮಾಡಿದ ಆತ್ಮಹತ್ಯೆ ಎಷ್ಟು ಗಾಲಿಗಳು ಉರುಳಿ
ಹೋದುವು ಎಷ್ಟೊಂದು ಸರ್ತಿ ಎಷ್ಟು ಬೆಂಕಿಯ
ಕಣಗಳು ಸಿಡಿದುವು ಇವನ ಕಣ್ಣುಗಳಲ್ಲಿ!

ಅದೊ ಅದೋ ಸಮೀಪಿಸುವ ಅದೆಂಥ ಸದ್ದು ?
ಇನ್ನೊಂದು ಲೋಕದಿಂದೆದ್ದು ಬಂದಂತಿದೆ!
ಭೀತನಾಗದಿರು! ಅದು ಇನ್ನೊಂದು ಗಾಡಿ
ತುಸು ಹೊತ್ತು, ನಿಂತು ಹೋಗುವುದು, ಆಮೇಲೆ
ಎಲ್ಲ ಮೊದಲಿನಂತಾಗುವುದು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...