Home / ಕವನ / ಕವಿತೆ / ಕಾರಡ್ಕ

ಕಾರಡ್ಕ

ಕೆಲವು ಸ್ಥಳಗಳ ಹೆಸರುಗಳಿಗೆ ಹಸಿಹುಲ್ಲಿನ ವಾಸನೆ ಮತ್ತು
ಈಗ ತಾನೆ ಮಳೆನಿಂತ ಮಣ್ಣಿನ ತೇವಗಳಿರುತ್ತವೆ.
ಅಪರಾಹ್ನದ ಇಳಿಬಿಸಿಲಲ್ಲಿ ಮನೆಮುಂದಿನ ಪಾರದರ್ಶಕ
ತೋಡಿನಲ್ಲಿ ಕಲ್ಲಿನ ಪಲ್ಲೆಗಳು ಏಡಿಗಳಂತೆ ಮಲಗಿರುವುದನ್ನು
ನೆನಪಿಗೆ ತರುತ್ತದೆ.

ಪಶ್ಚಿಮದಲ್ಲಿ ಹೊಳೆವ ಸಮುದ್ರದ ಅಂಚಿನಂತೆ
ಸ್ಪಷ್ಟವಾಗಿರುತ್ತದೆ. ಬಹುದೂರದ ಆಕಾಶದಲ್ಲಿ ಮಾಯುವ
ಘಟ್ಟಗಳ ಶಿಖರಗಳಂತೆ ಅಸ್ಪಷ್ಟವಾಗಿರುತ್ತವೆ ಕೂಡ.
ಅಂಥ ಸ್ಥಳಗಳಿಂದ ಸಂಜೆ ಕಣಿವೆಗಳಲ್ಲಿ ಇರುಳು
ತುಂಬಿ ಬರುವುದನ್ನು ಕಣ್ಣಾರೆ ಕಾಣಬಹುದು.

ಹೆಮ್ಮರಗಳು ಕಡಿದುರುಳಬಹುದು. ಬೆಂಕಿಯಿಟ್ಪರೆ ಬುಡಗಳು
ಅನೇಕ ದಿನಗಳ ತನಕ ಉರಿದು ಬೂದಿಯಾಗಬಹುದು ಅಥವ
ಕಮರಿ ಹೋಗಬಹುದು. ಬೆಂಕಿ ಹಚ್ಚಿದ ಕಾಡು ಇಡೀ ಗ್ರಾಮದ
ಮೇಲೆ ಕವಿಸುವುದು ಕಂದು ಹೊಗೆ. ಬಿಸಿಲು ಬೀಳುವ ದಿನ
ಆ ಬಣ್ಣಕ್ಕೆ ಬೇರೆ ಹೋಲಿಕೆಯಿಲ್ಲ.

ಒಮ್ಮೆ ವಲಸೆ ಹೋದ ಹುಲಿಗಳು ಮರಳಿ ಬರುವುದಿಲ್ಲ. ಆದರೂ
ಹೆಸರುಗಳು ಉಳಿಯುತ್ತವೆ. ಜಡಿ ಮಳೆಯಲ್ಲಿ ಹಳೆ ರೂಪಕಗಳಂತೆ
ಧ್ವನಿಸುತ್ತವೆ. ಚಳಿಗಾಲದ ಮುಗಿಯದ ರಾತ್ರಿಗಳಲ್ಲಿ
ಅಗ್ಗಿಷ್ಟಿಕೆಯ ಮುಂದೆ ಕತೆಗಳಾಗುತ್ತವೆ. ಬೇಸಿಗೆಯಲ್ಲಿ
ಮಾಗಿದ ಗೇರು ಮರಗಳಿಂದ ಕೆಂಪು ಹಳದಿ ಹಣ್ಣುಗಳಾಗಿ
ತೊನೆಯುತ್ತವೆ -ಅಥವ ಹಾಗೆಂದು ನೆನಪು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...