Home / ಕವನ / ಕವಿತೆ / ಕಾರಡ್ಕ

ಕಾರಡ್ಕ

ಕೆಲವು ಸ್ಥಳಗಳ ಹೆಸರುಗಳಿಗೆ ಹಸಿಹುಲ್ಲಿನ ವಾಸನೆ ಮತ್ತು
ಈಗ ತಾನೆ ಮಳೆನಿಂತ ಮಣ್ಣಿನ ತೇವಗಳಿರುತ್ತವೆ.
ಅಪರಾಹ್ನದ ಇಳಿಬಿಸಿಲಲ್ಲಿ ಮನೆಮುಂದಿನ ಪಾರದರ್ಶಕ
ತೋಡಿನಲ್ಲಿ ಕಲ್ಲಿನ ಪಲ್ಲೆಗಳು ಏಡಿಗಳಂತೆ ಮಲಗಿರುವುದನ್ನು
ನೆನಪಿಗೆ ತರುತ್ತದೆ.

ಪಶ್ಚಿಮದಲ್ಲಿ ಹೊಳೆವ ಸಮುದ್ರದ ಅಂಚಿನಂತೆ
ಸ್ಪಷ್ಟವಾಗಿರುತ್ತದೆ. ಬಹುದೂರದ ಆಕಾಶದಲ್ಲಿ ಮಾಯುವ
ಘಟ್ಟಗಳ ಶಿಖರಗಳಂತೆ ಅಸ್ಪಷ್ಟವಾಗಿರುತ್ತವೆ ಕೂಡ.
ಅಂಥ ಸ್ಥಳಗಳಿಂದ ಸಂಜೆ ಕಣಿವೆಗಳಲ್ಲಿ ಇರುಳು
ತುಂಬಿ ಬರುವುದನ್ನು ಕಣ್ಣಾರೆ ಕಾಣಬಹುದು.

ಹೆಮ್ಮರಗಳು ಕಡಿದುರುಳಬಹುದು. ಬೆಂಕಿಯಿಟ್ಪರೆ ಬುಡಗಳು
ಅನೇಕ ದಿನಗಳ ತನಕ ಉರಿದು ಬೂದಿಯಾಗಬಹುದು ಅಥವ
ಕಮರಿ ಹೋಗಬಹುದು. ಬೆಂಕಿ ಹಚ್ಚಿದ ಕಾಡು ಇಡೀ ಗ್ರಾಮದ
ಮೇಲೆ ಕವಿಸುವುದು ಕಂದು ಹೊಗೆ. ಬಿಸಿಲು ಬೀಳುವ ದಿನ
ಆ ಬಣ್ಣಕ್ಕೆ ಬೇರೆ ಹೋಲಿಕೆಯಿಲ್ಲ.

ಒಮ್ಮೆ ವಲಸೆ ಹೋದ ಹುಲಿಗಳು ಮರಳಿ ಬರುವುದಿಲ್ಲ. ಆದರೂ
ಹೆಸರುಗಳು ಉಳಿಯುತ್ತವೆ. ಜಡಿ ಮಳೆಯಲ್ಲಿ ಹಳೆ ರೂಪಕಗಳಂತೆ
ಧ್ವನಿಸುತ್ತವೆ. ಚಳಿಗಾಲದ ಮುಗಿಯದ ರಾತ್ರಿಗಳಲ್ಲಿ
ಅಗ್ಗಿಷ್ಟಿಕೆಯ ಮುಂದೆ ಕತೆಗಳಾಗುತ್ತವೆ. ಬೇಸಿಗೆಯಲ್ಲಿ
ಮಾಗಿದ ಗೇರು ಮರಗಳಿಂದ ಕೆಂಪು ಹಳದಿ ಹಣ್ಣುಗಳಾಗಿ
ತೊನೆಯುತ್ತವೆ -ಅಥವ ಹಾಗೆಂದು ನೆನಪು.
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...