Home / ಕಥೆ / ಜನಪದ / ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...