ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ಲುಟೋಯ್
Next post ಮಿಂಚುಳ್ಳಿ ಬೆಳಕಿಂಡಿ – ೫೫

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…