Home / ಕಥೆ / ಜನಪದ / ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...