Home / ಕಥೆ / ಜನಪದ / ಜಾತ್ರೆಯ ಗದ್ದಲ

ಜಾತ್ರೆಯ ಗದ್ದಲ

ಚಿತ್ರ: ಪಿಕ್ಸಾಬೇ

ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ ಮೂಗೇರಿಸಿ, ಅಂಗಿಯ ತೋಳಿನಿಂದ ಒರೆಸಿಕೊಳ್ಳುವನು.

ಬಲಧಾರೆಯನ್ನು ಬಲತೋಳಿನಿಂದ, ಎಡಧಾರೆಯನ್ನು ಎಡತೋಳಿನಿಂದ ಒರೆಸಿಕೊಂಡು ಅಂಗಿಯ ತೋಳತುದಿಗಳೆರಡೂ ಕಟುರಾಗಿದ್ದವು. ಅದರಂತೆ ಹುಣಸಿಕ್ಕನು ಕೈಬೆರಳ ಸಂದುಗಳಲ್ಲಿ ತುರಿಕೆಯೆದ್ದರೆ ಕೈಗೆ ಕತ್ತರಿ ಮಾಡಿ ತಿಕ್ಕಾಡುವದರಿಂದ ತೊಗಲೆಲ್ಲ ಕೆತ್ತಿಹೋಗಿ ನೆತ್ತರು ಸುರಿಯುವದು.

ಮೇಳದವರು ಅಟ್ಟಹೂಡಿ ತಾವು ಕಲಿತ ಬಯಲಾಟವನ್ನು ಆಡುವದಕ್ಕೆ ಅಣಿಯಾದರು. ಸಂಕಣ್ಣ – ಹುಣಿಸಿಕ್ಕರನ್ನು ಕರೆದು, ಇಂದಿನ ರಾತ್ರಿಯಾದರೂ ಹೇಸಿತನಕ್ಕೆ ಆಸ್ಪದ ಕೊಡದೆ, ಚೊಕ್ಕಾಗಿರಬೇಕೆಂದು ಅವರಿಗೆ ಕಟ್ಟಪ್ಪಣೆ ಮಾಡಿದರು. ನಿಮ್ಮ ಹೇಸಿತನ ಕಂಡುಬಂದರೆ, ನಿಂತಕಾಲಮೇಲೆ ಅಟ್ಟದಿಂದ ಇಳಿಸಿ ನಿಮ್ಮನ್ನು ಮನೆಗೆ ಕಳಿಸುವೆವು ಎಂದು ಹೆದರಿಕೆ ಹಾಕಿದರು. ಆ ಲಕ್ಷ್ಮಣರೇಖೆಯಲ್ಲಿಯೇ ಅಂದಿನ ಇರುಳನ್ನು ಕಳೆಯುವೆವೆಂದು ಅವರಿಬ್ಬರೂ ಮಾತುಕೊಟ್ಟರು.

ಹಳ್ಳಿಯವರೆಲ್ಲ ಉಂಡುಂಡುಬಂದು ಬಯಲಲ್ಲಿ ಸೇರಿದರು. ತಡಮಾಡಿದರೆ ದೂರದಲ್ಲಿಯೇ ಕುಳಿತುಕೊಳ್ಳಬೇಕಾಗುವದೆಂದು ಜನರು ಬೇಗಬೇಗನೆ ಬಂದರು.

ಬಯಲು ತುಂಬುವ ಹೊತ್ತಿಗೆ ಗಣಪತಿ ಸ್ತೋತ್ರವು ಆರಂಭವಾಯಿತು. ಅರ್ಧ ರಾತ್ರಿ ಕಳೆಯುವ ಹೊತ್ತಿಗೆ ಕಥೆ ಭರತಿಗೆ ಬಂತು. ಜನರೆಲ್ಲ ನಿಸ್ತಬ್ಬರಾಗಿ, ಬಿಟ್ಟ ಕಣ್ಣುಗಳಿಂದ ನೋಡುತ್ತ ಕುಳಿತುಕೊಂಡಿದ್ದರು. ಪಾತ್ರಧಾರಿಗಳಿಗೆ ತುಸು ವಿಶ್ರಾಂತಿಯೂ ಬೇಕಾಗಿತ್ತು. ಆ ಸಂದರ್ಭದ ಸದುಪಯೋಗ ಮಾಡಿಕೊಳ್ಳಬೇಕೆಂದು ಸಂಕಣ್ಣ ಹುಣಸಿಕ್ಕ ಮಾತಾಡಿಕೊಂಡು ಒಂದು ಅಡ್ಡಸೋಗು ತರುವುದಕ್ಕೆ ಸಿದ್ಧತೆ ಮಾಡಿದರು.

“ಏನು ಯಮನೂರು ಜಾತ್ರೆಯೋ ಸಂಕಾ ! ಜನದಟ್ಟಣೆ ಏನು ಹೇಳಲಿ?”

“ಬನಶಂಕರಿ ಜಾತ್ರೆ ಅದಕ್ಕೂ ಗಡಚು. ಆ ನುಗ್ಗಾಟದಲ್ಲಿ ಒಳ್ಳೊಳ್ಳೆಯವರು ಜಬ್ಬಾಗಿ ಹೋಗುತ್ತಿದ್ದರು.”

“ಅಷ್ಟೊಂದು ಜನ ಸುಮ್ಮನೆ ಒಂದೆಡೆಗೇ ನಿಂತಿರಲಿಲ್ಲ. ಅತ್ತಿಂದ ಇತ್ತ, ಇತ್ತಿಂದ ಅತ್ತ ಬರುತ್ತಲೇ ಇತ್ತು; ಹೋಗುತ್ತಲೇ ಇತ್ತು” ಎಂದು ಹೇಳುವ
ಸಮಯದಲ್ಲಿ ಅತ್ತಿಂದ ಇತ್ತ, ಇತ್ತಿಂದ ಅತ್ತ ಅಂಗಿಯ ತೋಳುಗಳಿಂದ ಒಳಿತಾಗಿ ಮೂಗು ಒರೆಸಿಕೊಂಡನು ಸಂಕಣ್ಣ.

ಥೂ ಥೂ ಥೂ ! ಒಂದು ಹೆಜ್ಜೆ ಮುಂದೆ ಸಾಗೇನೆಂದರೆ ತಿಕ್ಕಾಟ ಮುಕ್ಕಾಟ ! ತಿಕ್ಕಾಟ ಮುಕ್ಕಾಟ !” ಎನುತ್ತ ಕೈ ಬೆರಳುಗಳ ಕತ್ತರಿಮಾಡಿ ತಿಕ್ಕಿ ತಿಕ್ಕಿ ಹುರುಕಿನ ತುರಿಕೆಯನ್ನು ತಮ್ಮಣಿಗೊಳಿಸಿಕೊಂಡನು ಹುಣಸಿಕ್ಕ.

ಈ ರೀತಿ ಅಡ್ಡಸೋಗು ಮುಗಿಸಿ ಅವರಿಬ್ಬರೂ ಒಳಗೆ ಬಂದು ಹಿಮ್ಮೇಳದವರನ್ನು ಕೂಡಿಕೊಂಡರು. ಮುಂದಿನ ಅರ್ಧರಾತ್ರಿಯನ್ನು ಅವನು ಮಾತುಕೊಟ್ಟಂತೆ ಕಳೆಯುವುದಕ್ಕೆ ಸಾಧ್ಯವಾಯಿತು. ಮೇಳದವರಿಗೆ ಜಾತ್ರೆಯ ಗದ್ದಲದ ಅರ್ಥವಾಗದೆ ಇರಲಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...