Home / ಕಥೆ / ಜನಪದ / ಜಾತ್ರೆಯ ಗದ್ದಲ

ಜಾತ್ರೆಯ ಗದ್ದಲ

ಚಿತ್ರ: ಪಿಕ್ಸಾಬೇ

ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ ಮೂಗೇರಿಸಿ, ಅಂಗಿಯ ತೋಳಿನಿಂದ ಒರೆಸಿಕೊಳ್ಳುವನು.

ಬಲಧಾರೆಯನ್ನು ಬಲತೋಳಿನಿಂದ, ಎಡಧಾರೆಯನ್ನು ಎಡತೋಳಿನಿಂದ ಒರೆಸಿಕೊಂಡು ಅಂಗಿಯ ತೋಳತುದಿಗಳೆರಡೂ ಕಟುರಾಗಿದ್ದವು. ಅದರಂತೆ ಹುಣಸಿಕ್ಕನು ಕೈಬೆರಳ ಸಂದುಗಳಲ್ಲಿ ತುರಿಕೆಯೆದ್ದರೆ ಕೈಗೆ ಕತ್ತರಿ ಮಾಡಿ ತಿಕ್ಕಾಡುವದರಿಂದ ತೊಗಲೆಲ್ಲ ಕೆತ್ತಿಹೋಗಿ ನೆತ್ತರು ಸುರಿಯುವದು.

ಮೇಳದವರು ಅಟ್ಟಹೂಡಿ ತಾವು ಕಲಿತ ಬಯಲಾಟವನ್ನು ಆಡುವದಕ್ಕೆ ಅಣಿಯಾದರು. ಸಂಕಣ್ಣ – ಹುಣಿಸಿಕ್ಕರನ್ನು ಕರೆದು, ಇಂದಿನ ರಾತ್ರಿಯಾದರೂ ಹೇಸಿತನಕ್ಕೆ ಆಸ್ಪದ ಕೊಡದೆ, ಚೊಕ್ಕಾಗಿರಬೇಕೆಂದು ಅವರಿಗೆ ಕಟ್ಟಪ್ಪಣೆ ಮಾಡಿದರು. ನಿಮ್ಮ ಹೇಸಿತನ ಕಂಡುಬಂದರೆ, ನಿಂತಕಾಲಮೇಲೆ ಅಟ್ಟದಿಂದ ಇಳಿಸಿ ನಿಮ್ಮನ್ನು ಮನೆಗೆ ಕಳಿಸುವೆವು ಎಂದು ಹೆದರಿಕೆ ಹಾಕಿದರು. ಆ ಲಕ್ಷ್ಮಣರೇಖೆಯಲ್ಲಿಯೇ ಅಂದಿನ ಇರುಳನ್ನು ಕಳೆಯುವೆವೆಂದು ಅವರಿಬ್ಬರೂ ಮಾತುಕೊಟ್ಟರು.

ಹಳ್ಳಿಯವರೆಲ್ಲ ಉಂಡುಂಡುಬಂದು ಬಯಲಲ್ಲಿ ಸೇರಿದರು. ತಡಮಾಡಿದರೆ ದೂರದಲ್ಲಿಯೇ ಕುಳಿತುಕೊಳ್ಳಬೇಕಾಗುವದೆಂದು ಜನರು ಬೇಗಬೇಗನೆ ಬಂದರು.

ಬಯಲು ತುಂಬುವ ಹೊತ್ತಿಗೆ ಗಣಪತಿ ಸ್ತೋತ್ರವು ಆರಂಭವಾಯಿತು. ಅರ್ಧ ರಾತ್ರಿ ಕಳೆಯುವ ಹೊತ್ತಿಗೆ ಕಥೆ ಭರತಿಗೆ ಬಂತು. ಜನರೆಲ್ಲ ನಿಸ್ತಬ್ಬರಾಗಿ, ಬಿಟ್ಟ ಕಣ್ಣುಗಳಿಂದ ನೋಡುತ್ತ ಕುಳಿತುಕೊಂಡಿದ್ದರು. ಪಾತ್ರಧಾರಿಗಳಿಗೆ ತುಸು ವಿಶ್ರಾಂತಿಯೂ ಬೇಕಾಗಿತ್ತು. ಆ ಸಂದರ್ಭದ ಸದುಪಯೋಗ ಮಾಡಿಕೊಳ್ಳಬೇಕೆಂದು ಸಂಕಣ್ಣ ಹುಣಸಿಕ್ಕ ಮಾತಾಡಿಕೊಂಡು ಒಂದು ಅಡ್ಡಸೋಗು ತರುವುದಕ್ಕೆ ಸಿದ್ಧತೆ ಮಾಡಿದರು.

“ಏನು ಯಮನೂರು ಜಾತ್ರೆಯೋ ಸಂಕಾ ! ಜನದಟ್ಟಣೆ ಏನು ಹೇಳಲಿ?”

“ಬನಶಂಕರಿ ಜಾತ್ರೆ ಅದಕ್ಕೂ ಗಡಚು. ಆ ನುಗ್ಗಾಟದಲ್ಲಿ ಒಳ್ಳೊಳ್ಳೆಯವರು ಜಬ್ಬಾಗಿ ಹೋಗುತ್ತಿದ್ದರು.”

“ಅಷ್ಟೊಂದು ಜನ ಸುಮ್ಮನೆ ಒಂದೆಡೆಗೇ ನಿಂತಿರಲಿಲ್ಲ. ಅತ್ತಿಂದ ಇತ್ತ, ಇತ್ತಿಂದ ಅತ್ತ ಬರುತ್ತಲೇ ಇತ್ತು; ಹೋಗುತ್ತಲೇ ಇತ್ತು” ಎಂದು ಹೇಳುವ
ಸಮಯದಲ್ಲಿ ಅತ್ತಿಂದ ಇತ್ತ, ಇತ್ತಿಂದ ಅತ್ತ ಅಂಗಿಯ ತೋಳುಗಳಿಂದ ಒಳಿತಾಗಿ ಮೂಗು ಒರೆಸಿಕೊಂಡನು ಸಂಕಣ್ಣ.

ಥೂ ಥೂ ಥೂ ! ಒಂದು ಹೆಜ್ಜೆ ಮುಂದೆ ಸಾಗೇನೆಂದರೆ ತಿಕ್ಕಾಟ ಮುಕ್ಕಾಟ ! ತಿಕ್ಕಾಟ ಮುಕ್ಕಾಟ !” ಎನುತ್ತ ಕೈ ಬೆರಳುಗಳ ಕತ್ತರಿಮಾಡಿ ತಿಕ್ಕಿ ತಿಕ್ಕಿ ಹುರುಕಿನ ತುರಿಕೆಯನ್ನು ತಮ್ಮಣಿಗೊಳಿಸಿಕೊಂಡನು ಹುಣಸಿಕ್ಕ.

ಈ ರೀತಿ ಅಡ್ಡಸೋಗು ಮುಗಿಸಿ ಅವರಿಬ್ಬರೂ ಒಳಗೆ ಬಂದು ಹಿಮ್ಮೇಳದವರನ್ನು ಕೂಡಿಕೊಂಡರು. ಮುಂದಿನ ಅರ್ಧರಾತ್ರಿಯನ್ನು ಅವನು ಮಾತುಕೊಟ್ಟಂತೆ ಕಳೆಯುವುದಕ್ಕೆ ಸಾಧ್ಯವಾಯಿತು. ಮೇಳದವರಿಗೆ ಜಾತ್ರೆಯ ಗದ್ದಲದ ಅರ್ಥವಾಗದೆ ಇರಲಿಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...