Home / ಲೇಖನ / ವಿಜ್ಞಾನ / ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...