Home / ಲೇಖನ / ವಿಜ್ಞಾನ / ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...