Home / ಲೇಖನ / ವಿಜ್ಞಾನ / ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...