ಉರುಬುವ ಹವ್ಯಾಸ ಬಿಡಿ

ಉರುಬುವ ಹವ್ಯಾಸ ಬಿಡಿ

ಚಿತ್ರ: ಮ್ಯಾಗೀ ಮೋರಿಲ್

ತಿಂಡಿ, ಕಾಫಿ, ಊಟ, ಮುಂತಾದ ಬಿಸಿ ಪದಾರ್ಥಗಳನ್ನು ತಣ್ಣಗಾಗಿಸಲು ಬಾಯಿಂದ ಉಸಿರು ಊದುವ ಹವ್ಯಾಸ ಬಹಳ ಜನರಲ್ಲಿದೆ. ಹಾಗೆ ಉರುಬುವುದು ತೀರ ತಪ್ಪು. ಅನಾವಶ್ಯಕ ಕೂಡ; ಪ್ರತಿಯೊಬ್ಬರ ಬಾಯಲ್ಲಿನ ಗಾಳಿ ಒಂದೇ ತೆರನಾಗಿರುವುದಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಜೊಲ್ಲಿನ ತುಂತುರಿನಿಂದೊಡಗೂಡಿ ತೇವವಾಗಿರುತ್ತದೆ. ಹೀಗೆ ಉರುಬಿದಾಗ ಬಾಯಿಯಿಂದ ಹೊರಟ ಗಾಳಿ ಆಹಾರ ಪಾನೀಯಗಳ ಮೇಲೆ ಜೊಲ್ಲಿನ ತುಂತುರು ಬೀಳುತ್ತದೆ. ತಮ್ಮದೇ ಆಹಾರವನ್ನು ತಾವು ಉರುಬಿಕೊಂಡರೆ ಪರವಾಗಿಲ್ಲ. ಆದರೆ ಎಷ್ಟೋ ವೇಳೆ ಇತರರು [ಮಕ್ಕಳಿಗೆ ತಿನ್ನಿಸುವಾಗ, ಕುಡಿಸುವಾಗ] ಉರುಬುವುದೇ ಹೆಚ್ಚು. ಹೊಟೇಲುಗಳಲ್ಲಿ ಹಾಲಿನ ಕೆನೆ ತೆಗೆಯಲು ಉರುಬಿ ತಮ್ಮ ಎಂಜಲನ್ನು ಎಷ್ಟೋ ಮಂದಿಗೆ ಹಂಚುತ್ತಾರೆ. ತಮಗೆ ಅರಿವಿಲ್ಲದೆ ಮನೆಯಲ್ಲೂ ಕೂಡ ಅಡಿಗೆ ಮಾಡುವ ಗೃಹಿಣಿಯರು ಅಥವಾ ಅಡಿಗೆಯವನು ಹೀಗೆ ಇತರರಿಗೆ ತನ್ನ ಎಂಜಲನ್ನು ಹಂಚುವುದುಂಟು.

ಹೀಗೆ ಮಾಡುವಾಗ ಉರುಲಿದವರ ಬಾಯಲ್ಲಿ ಇರಬಹುದಾದ ರೋಗ ಕ್ರಿಮಿಗಳು ಮತ್ತು ದುರ್ಗಂಧ ಇತರರಿಗೂ ಹಂಚಿಕೆಯಾಗುತ್ತದೆ. ಇದರಿಂದ ಹಲವು ರೋಗ ಹರಡಲು ಸಹಕಾರಿಯಾಗುತ್ತದೆ. ಶ್ವಾಸಕೋಶ [ತೊಳ್ಳೆ]ದಲ್ಲಿನ ಕ್ಷಯ ನಾಯಿಕೆಮ್ಮು ದಡಾರ ಸಿತಾಳ ಸಿಡುಬು ಮುಂತಾದ ಹಲವು ಬಗೆಯ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ಹೀಗಾಗಿ ಜನತೆಯ ಹಿತಕ್ಕೆ ಧಕ್ಕೆ ತರುವ ಈ ಅಭ್ಯಾಸ ಏಕೆ ಬೇಕು? ಬಿಸಿ ಆರಿಸಿಕೊಳ್ಳಬೇಕಾದಾಗ ರಟ್ಟು, ಮಂದವಾದ ಕಾಗದ ಅಥವಾ ಬೀಸಣಿಗೆಯನ್ನು ಬಳಸಬಹುದು.

ಅಪಾಯ:

ಬಸಿಯಲ್ಲಿ ಚಹ ಕುಡಿಯುವುದು ಅಸಭ್ಯ ಲಕ್ಷಣವೆಂದು ಭಾವಿಸುವ ಜನರೆಷ್ಟೋ ಉಂಟು. ಅಸಭ್ಯ ಲಕ್ಷಣವೆನಿಸಿದರೂ ಹೀಗೆ ಕುಡಿಯುವುದು ಆರೋಗ್ಯ ದೃಷ್ಠಿಯಿಂದ ಬಹಳ ಒಳ್ಳೆಯದು. ಇದರಿಂದ ಬಹಳ ಬಿಸಿಯಾದ ಚಹ ಹೊಟ್ಟೆಗೆ ಹೋಗುವುದಿಲ್ಲ. ಬಹಳ ಬಿಸಿಯಾದ ಚಹ ಉದರ ಕೋಶದ ಗೋಡೆಗಳಿಗೆ ಅಪಾಯವುಂಟುಮಾಡುವುದು. ಆದ್ದರಿಂದ ಚಹ, ಹಾಲು ಏನೇ ಕುಡಿಯುವಾಗ ಬಸಿಯಲ್ಲೇ ಕುಡಿಯಿರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವು – ನೀವು
Next post ದಬ್ಬಾಳಿಕೆ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಆವಲಹಳ್ಳಿಯಲ್ಲಿ ಸಭೆ

    ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…