Home / ಲೇಖನ / ವಿಜ್ಞಾನ / ಯಾವುದು ಸರಿ?

ಯಾವುದು ಸರಿ?

ಚಿತ್ರ: ಅಂಕ

ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ!

ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕೋಶದಲ್ಲಿ ಕಲ್ಲು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದೆಂದು ವಿಜ್ಞಾನ ಹೇಳುತ್ತದೆ.

ಆದರೆ “ನ್ಯಾಷನಲ್ ಎಗ್ ಕೋ-ಆರ್ಡಿನೇಶನ್ ಕಮಿಟಿ” (ಎನ್.ಇ.ಸಿ.ಸಿ)ಯ ಪ್ರಕಾರ ಮೊಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಪ್ರೋಟೀನುಗಳು ಮತ್ತು ಫಾಸ್ಫೋರಸ್‌ಗಳಿವೆ. ಸ್ಪುಟವಾದ ದೃಷ್ಠಿ ಮತ್ತು ಆರೋಗ್ಯಕರ ತ್ವಚೆಗೆ ಬೇಕಾಗುವ ವಿಟಮಿನ್ ‘ಎ’, ಉತ್ತಮ ಜೀರ್ಣಶಕ್ತಿ ಮತ್ತು ಬಲಿಷ್ಠ ಸ್ನಾಯುಗಳಿಗೆ ಅಗತ್ಯವಾದ ವಿಟಮಿನ್ ‘ಬಿ’, ಗಟ್ಟಿಯಾದ ಎಲುಬುಗಳಿಗಾಗಿ ವಿಟಮಿನ್ ‘ಡಿ’ ಮತ್ತು ರಕ್ತಕ್ಕೆ ಅಗತ್ಯವಿರುವ ಕಬ್ಬಿಣದ ಸತ್ವ ಇವೆಲ್ಲವೂ ಮೊಟ್ಟೆಯಲ್ಲಿರುವುದಾಗಿ ಅದು ಪ್ರಚಾರ ಮಾಡುತ್ತಿದೆ. “ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ”. “ಸಂಡೆ ಹೋ ಯಾ ಮಂಡೇ, ರೋಜ್ ಖಾನ ಏಕ್ ಅಂಡೆ” ಎಂಬ ಘೋಷಣೆಗಳೊಂದಿಗೆ ಪದೇ ಪದೇ ದೂರದರ್ಶನ ಮತ್ತು ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತುಗಳ ಮೂಲಕ ಮೊಟ್ಟೆಯನ್ನು ತಿನ್ನುವಂತೆ ಪ್ರಚೋದಿಸುತ್ತಿದೆ!

ಎರಡರಲ್ಲಿ ಯಾವುದನ್ನು ನಂಬುವುದು? ಇದು ಜನಸಾಮಾನ್ಯರನ್ನು ಗೊಂದಲಕ್ಕೆ ಈಡುಮಾಡಿದೆ. ಅತ್ತ ನುಂಗಲೂ ಆಗದೆ ಇತ್ತು ಉಗುಳಲೂ ಆಗದೆ ಗಂಟಲಲ್ಲೇ ಉಳಿಯುವ ಸ್ಥಿತಿ. ಇದರ ರಹಸ್ಯವನ್ನು ಬಿಡಿಸುವವರ್‍ಯಾರು?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...