Home / ಲೇಖನ / ವಿಜ್ಞಾನ / ಯಾವುದು ಸರಿ?

ಯಾವುದು ಸರಿ?

ಚಿತ್ರ: ಅಂಕ

ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ!

ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕೋಶದಲ್ಲಿ ಕಲ್ಲು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದೆಂದು ವಿಜ್ಞಾನ ಹೇಳುತ್ತದೆ.

ಆದರೆ “ನ್ಯಾಷನಲ್ ಎಗ್ ಕೋ-ಆರ್ಡಿನೇಶನ್ ಕಮಿಟಿ” (ಎನ್.ಇ.ಸಿ.ಸಿ)ಯ ಪ್ರಕಾರ ಮೊಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಪ್ರೋಟೀನುಗಳು ಮತ್ತು ಫಾಸ್ಫೋರಸ್‌ಗಳಿವೆ. ಸ್ಪುಟವಾದ ದೃಷ್ಠಿ ಮತ್ತು ಆರೋಗ್ಯಕರ ತ್ವಚೆಗೆ ಬೇಕಾಗುವ ವಿಟಮಿನ್ ‘ಎ’, ಉತ್ತಮ ಜೀರ್ಣಶಕ್ತಿ ಮತ್ತು ಬಲಿಷ್ಠ ಸ್ನಾಯುಗಳಿಗೆ ಅಗತ್ಯವಾದ ವಿಟಮಿನ್ ‘ಬಿ’, ಗಟ್ಟಿಯಾದ ಎಲುಬುಗಳಿಗಾಗಿ ವಿಟಮಿನ್ ‘ಡಿ’ ಮತ್ತು ರಕ್ತಕ್ಕೆ ಅಗತ್ಯವಿರುವ ಕಬ್ಬಿಣದ ಸತ್ವ ಇವೆಲ್ಲವೂ ಮೊಟ್ಟೆಯಲ್ಲಿರುವುದಾಗಿ ಅದು ಪ್ರಚಾರ ಮಾಡುತ್ತಿದೆ. “ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ”. “ಸಂಡೆ ಹೋ ಯಾ ಮಂಡೇ, ರೋಜ್ ಖಾನ ಏಕ್ ಅಂಡೆ” ಎಂಬ ಘೋಷಣೆಗಳೊಂದಿಗೆ ಪದೇ ಪದೇ ದೂರದರ್ಶನ ಮತ್ತು ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತುಗಳ ಮೂಲಕ ಮೊಟ್ಟೆಯನ್ನು ತಿನ್ನುವಂತೆ ಪ್ರಚೋದಿಸುತ್ತಿದೆ!

ಎರಡರಲ್ಲಿ ಯಾವುದನ್ನು ನಂಬುವುದು? ಇದು ಜನಸಾಮಾನ್ಯರನ್ನು ಗೊಂದಲಕ್ಕೆ ಈಡುಮಾಡಿದೆ. ಅತ್ತ ನುಂಗಲೂ ಆಗದೆ ಇತ್ತು ಉಗುಳಲೂ ಆಗದೆ ಗಂಟಲಲ್ಲೇ ಉಳಿಯುವ ಸ್ಥಿತಿ. ಇದರ ರಹಸ್ಯವನ್ನು ಬಿಡಿಸುವವರ್‍ಯಾರು?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...