Home / ಲೇಖನ / ವಿಜ್ಞಾನ / ಯಾವುದು ಸರಿ?

ಯಾವುದು ಸರಿ?

ಚಿತ್ರ: ಅಂಕ

ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ!

ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕೋಶದಲ್ಲಿ ಕಲ್ಲು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದೆಂದು ವಿಜ್ಞಾನ ಹೇಳುತ್ತದೆ.

ಆದರೆ “ನ್ಯಾಷನಲ್ ಎಗ್ ಕೋ-ಆರ್ಡಿನೇಶನ್ ಕಮಿಟಿ” (ಎನ್.ಇ.ಸಿ.ಸಿ)ಯ ಪ್ರಕಾರ ಮೊಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಪ್ರೋಟೀನುಗಳು ಮತ್ತು ಫಾಸ್ಫೋರಸ್‌ಗಳಿವೆ. ಸ್ಪುಟವಾದ ದೃಷ್ಠಿ ಮತ್ತು ಆರೋಗ್ಯಕರ ತ್ವಚೆಗೆ ಬೇಕಾಗುವ ವಿಟಮಿನ್ ‘ಎ’, ಉತ್ತಮ ಜೀರ್ಣಶಕ್ತಿ ಮತ್ತು ಬಲಿಷ್ಠ ಸ್ನಾಯುಗಳಿಗೆ ಅಗತ್ಯವಾದ ವಿಟಮಿನ್ ‘ಬಿ’, ಗಟ್ಟಿಯಾದ ಎಲುಬುಗಳಿಗಾಗಿ ವಿಟಮಿನ್ ‘ಡಿ’ ಮತ್ತು ರಕ್ತಕ್ಕೆ ಅಗತ್ಯವಿರುವ ಕಬ್ಬಿಣದ ಸತ್ವ ಇವೆಲ್ಲವೂ ಮೊಟ್ಟೆಯಲ್ಲಿರುವುದಾಗಿ ಅದು ಪ್ರಚಾರ ಮಾಡುತ್ತಿದೆ. “ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ”. “ಸಂಡೆ ಹೋ ಯಾ ಮಂಡೇ, ರೋಜ್ ಖಾನ ಏಕ್ ಅಂಡೆ” ಎಂಬ ಘೋಷಣೆಗಳೊಂದಿಗೆ ಪದೇ ಪದೇ ದೂರದರ್ಶನ ಮತ್ತು ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತುಗಳ ಮೂಲಕ ಮೊಟ್ಟೆಯನ್ನು ತಿನ್ನುವಂತೆ ಪ್ರಚೋದಿಸುತ್ತಿದೆ!

ಎರಡರಲ್ಲಿ ಯಾವುದನ್ನು ನಂಬುವುದು? ಇದು ಜನಸಾಮಾನ್ಯರನ್ನು ಗೊಂದಲಕ್ಕೆ ಈಡುಮಾಡಿದೆ. ಅತ್ತ ನುಂಗಲೂ ಆಗದೆ ಇತ್ತು ಉಗುಳಲೂ ಆಗದೆ ಗಂಟಲಲ್ಲೇ ಉಳಿಯುವ ಸ್ಥಿತಿ. ಇದರ ರಹಸ್ಯವನ್ನು ಬಿಡಿಸುವವರ್‍ಯಾರು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...