Home / ಲೇಖನ / ವಿಜ್ಞಾನ / ಯಾವುದು ಸರಿ?

ಯಾವುದು ಸರಿ?

ಚಿತ್ರ: ಅಂಕ

ಬಹಳ ದಿನಗಳಿಂದ ಈ ಕಣ್ಣುಮುಚ್ಚಾಲೆ ಆಟ ನಡೆಯುತ್ತಿದೆ!

ಒಂದು ಮೊಟ್ಟೆಯಲ್ಲಿ ಸುಮಾರು ನಾಲ್ಕು ಗ್ರೇನುಗಳಷ್ಟು ಕೊಲೆಸ್ಟರಾಲ್ ಇರುತ್ತದೆ. ಕೊಲೆಸ್ಟರಾಲ್‌ನ ಇಷ್ಟು ಅಧಿಕ ಪ್ರಮಾಣದಿಂದ ಅಧಿಕ ರಕ್ತದೊತ್ತಡ, ಹೃದಯ ಮತ್ತು ಮೂತ್ರಪಿಂಡದ ರೋಗಗಳು, ಪಿತ್ತಕೋಶದಲ್ಲಿ ಕಲ್ಲು ಮುಂತಾದ ರೋಗಗಳು ಕಾಣಿಸಿಕೊಳ್ಳಬಹುದೆಂದು ವಿಜ್ಞಾನ ಹೇಳುತ್ತದೆ.

ಆದರೆ “ನ್ಯಾಷನಲ್ ಎಗ್ ಕೋ-ಆರ್ಡಿನೇಶನ್ ಕಮಿಟಿ” (ಎನ್.ಇ.ಸಿ.ಸಿ)ಯ ಪ್ರಕಾರ ಮೊಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಪ್ರೋಟೀನುಗಳು ಮತ್ತು ಫಾಸ್ಫೋರಸ್‌ಗಳಿವೆ. ಸ್ಪುಟವಾದ ದೃಷ್ಠಿ ಮತ್ತು ಆರೋಗ್ಯಕರ ತ್ವಚೆಗೆ ಬೇಕಾಗುವ ವಿಟಮಿನ್ ‘ಎ’, ಉತ್ತಮ ಜೀರ್ಣಶಕ್ತಿ ಮತ್ತು ಬಲಿಷ್ಠ ಸ್ನಾಯುಗಳಿಗೆ ಅಗತ್ಯವಾದ ವಿಟಮಿನ್ ‘ಬಿ’, ಗಟ್ಟಿಯಾದ ಎಲುಬುಗಳಿಗಾಗಿ ವಿಟಮಿನ್ ‘ಡಿ’ ಮತ್ತು ರಕ್ತಕ್ಕೆ ಅಗತ್ಯವಿರುವ ಕಬ್ಬಿಣದ ಸತ್ವ ಇವೆಲ್ಲವೂ ಮೊಟ್ಟೆಯಲ್ಲಿರುವುದಾಗಿ ಅದು ಪ್ರಚಾರ ಮಾಡುತ್ತಿದೆ. “ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ”. “ಸಂಡೆ ಹೋ ಯಾ ಮಂಡೇ, ರೋಜ್ ಖಾನ ಏಕ್ ಅಂಡೆ” ಎಂಬ ಘೋಷಣೆಗಳೊಂದಿಗೆ ಪದೇ ಪದೇ ದೂರದರ್ಶನ ಮತ್ತು ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತುಗಳ ಮೂಲಕ ಮೊಟ್ಟೆಯನ್ನು ತಿನ್ನುವಂತೆ ಪ್ರಚೋದಿಸುತ್ತಿದೆ!

ಎರಡರಲ್ಲಿ ಯಾವುದನ್ನು ನಂಬುವುದು? ಇದು ಜನಸಾಮಾನ್ಯರನ್ನು ಗೊಂದಲಕ್ಕೆ ಈಡುಮಾಡಿದೆ. ಅತ್ತ ನುಂಗಲೂ ಆಗದೆ ಇತ್ತು ಉಗುಳಲೂ ಆಗದೆ ಗಂಟಲಲ್ಲೇ ಉಳಿಯುವ ಸ್ಥಿತಿ. ಇದರ ರಹಸ್ಯವನ್ನು ಬಿಡಿಸುವವರ್‍ಯಾರು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...