Home / ಲೇಖನ / ಕೃಷಿ / ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

ಚಿತ್ರ: ಐಲೋನ

ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇದನ್ನು ಗಮನಿಸಿದ್ದೀರಾ? ಇದಕ್ಕೆ ಕಾರಣ ಸಸ್ಯಗಳಲ್ಲಿ ನಡೆಯುವ ರಾಸಾಯನಿಕ ಸಮರ! ಅಂದರೆ ಕೆಲವು ಸಸ್ಯಗಳು ನಿಷೇಧಕ ರಾಶಯನಿಕಗಳನ್ನು ತಯಾರಿಸಿ ಇನ್ನಿತರ ಸಸ್ಯಗಳ ಬೆಳವಣಿಗೆಗೆ ಅಡ್ಡಿಯನ್ನುಂಟು ಮಾಡುತ್ತವೆ.

ಕಳೆನಾಶಕ ರಸಾಯನ
ಸಸ್ಯಗಳಲ್ಲಿ ದ್ವಿತೀಯಕ ಪದಾರ್ಥಗಳು ಉತ್ಪತ್ತಿಯಾಗುತ್ತವಷ್ಟೇ. ಅವು ಬೇರು ಅಥವಾ ಎಲೆಗಳ ಮುಖಾಂತರ ಮಣ್ಣನ್ನು ಸೇರುತ್ತವೆ. ಅಲ್ಲಿ ಕಳೆನಾಶಕ ರಸಾಯನದ ಹಾಗೆ ವರ್ತಿಸುತ್ತವೆ.

ಅಕ್ರೋಡ ಗಿಡದ ಸುತ್ತಮುತ್ತಲಿನ ಸಸ್ಯಗಳು ಮತ್ತು ಹುಲ್ಲು ಸರಿಯಾಗಿ ಏಕೆ ಬೆಳೆಯುತ್ತಿಲ್ಲ ಎಂದು ವಿಜ್ಞಾನಿಗಳು ಪ್ರಶ್ನೆ ಹಾಕಿಕೊಂಡು ಸಂಶೋಧನೆ ನಡೆಸಿದರು. ಪರೀಕ್ಷಿಸಿದಾಗ ಅದರ ಎಲೆ, ತೊಗಟೆ, ಹಣ್ಣಿನ ಸಿಪ್ಪೆ ಮತ್ತಿತರ ಅಂಗಾಂಗಗಳಿಂದ ‘ಜುಗ್ಲೋನ್’ ಎಂಬ ರಾಸಾಯನಿಕ ಬೇರ್ಪಡಿಸಲಾಯಿತು. ಈ ರಾಸಾಯನಿಕ ಮಣ್ಣನ್ನು ಸೇರಿ, ಆಕ್ಸೀಡೀಕರಣವಾಗಿ ಇತರ ಸಸ್ಯಗಳ ಬೆಳವಣಿಗೆ ಕುಂಠಿತಗೊಳಿಸಿತ್ತು.

ಮಣ್ಣಿಗೆ ಆವಿಶೀಲ ತೈಲ
ಸಾಲ್ವಿಯಾ ಜಾತಿಯ ಮರಗಳ ಎಲೆಗಳು ನೆಲಕ್ಕೆ ಬಿದ್ದಾಗ ಆವಿಶೀಲ ತೈಲವನ್ನು ಮಣ್ಣಿಗೆ ಬಿಡುತ್ತವೆ. ಅದು ಇನ್ನಿತರ ಸಸ್ಯಗಳ ಬೀಜಗಳು ಮೊಳಕೆಒಡೆಯದ ಹಾಗೆ ತಡೆ ಒಡ್ಡುತ್ತವೆ. ಕ್ಲಿರೋಡೆಂಡ್ರಾನ್ ಸಸ್ಯವು ವಿಸರ್ಜಿಸುವ ರಾಸಾಯನಿಕದಿಂದ ತುರುಬಿಗಿಡ, ಮುಳ್ಳ ಕೀರೆ ಸೊಪ್ಪು, ಚಗಚಿ ಇತ್ಯಾದಿ ಸಸ್ಯಗಳು ಒಣಗಿಹೋಗುತ್ತವೆ. ಪಾರ್ಥೇನಿಯಂ, ಆಡನ್‌ಸೋನಿಯ ಮತ್ತಿತರ ಸಸ್ಯಗಳೂ ರಾಸಾಯನಿಕಗಳನ್ನು ವಿಸರ್ಜಿಸುತ್ತವೆ.

ಮಣ್ಣಿನಲ್ಲಿರುವ ಪೆನಿಸಿಲಿಯಂ ಶಿಲೀಂಧ್ರ ಪ್ರತಿ ಜೈವಿಕ ಪದಾರ್ಥ ಉತ್ಪತ್ತಿ ಮಾಡಿ ಬಿಡುಗಡೆ ಮಾಡುತ್ತದೆ. ಅದರಿಂದ ಅನೇಕ ಬ್ಯಾಕ್ಟೀರಿಯಾ ಪ್ರಭೇದಗಳು ನಾಶವಾಗುತ್ತವೆ. ಹೀಗೆ ಸಸ್ಯಗಳು ಒಸರುವ ರಾಸಾಯನಿಕಗಳಲ್ಲಿ ಕೆಲವನ್ನು ಮಾತ್ರ ಗುರುತಿಸಲಾಗಿದೆ. ಅವು ಫಿನೋಲಿಕ್ ಆಮ್ಲ, ಲ್ಯಾಕ್ಟೋನ್‌ಗಳು, ಕ್ಯಾಂಫರ್‍, ನಾರಿಂಗಿನಿನ್, ಸ್ಕೇಲಿನ್, ಆರ್ಬುಟಿವ್ ಇತ್ಯಾದಿ. ಗುರುತಿಸಲಾಗದ ಅನೇಕ ರಾಸಾಯನಿಕಗಳು ಸವಾಲಾಗಿ ನಿಂತಿವೆ. ಸಸ್ಯಗಳು ವಿಸರ್ಜಿಸುವ ರಾಸಾಯನಿಕವು ಒಂದು ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸಿದರೆ ಇನ್ನೊಂದರ ಬೆಳವಣಿಗೆ ಶೀಘ್ರಗೊಳಿಸಲೂಬಹುದು!

ಸಸ್ಯಗಳು ರಾಸಾಯನಿಕ ಸಮರದಿಂದ ತಮ್ಮ ವೈರಿಯನ್ನು ಹೀಗೆ ಹತೋಟಿಯಲ್ಲಿಡುತ್ತವೆ. ಇದು ವಿನಾಶಕಾರಿ ಕಳೆ ಗಿಡಗಳನ್ನು ನಿಯಂತ್ರಿಸಲು ಹೊಸದೊಂದು ಪರಿಣಾಮಕಾರಿ ರಾಸಾಯನಿಕಗಳ ಆವಿಷ್ಕಾರಕ್ಕೆ ನಾಂದಿ ಆಗಬಹುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...