Home / ಲೇಖನ / ಕೃಷಿ / ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

ಕೃಷಿ ಸಸ್ಯಗಳಲ್ಲೇ ಕಳೆನಾಶಕ ರಾಸಾಯನ

ಚಿತ್ರ: ಐಲೋನ

ನಿಮ್ಮ ಹೊಲದ ಬೇಲಿಗುಂಟ ನೀಲಗಿರಿ ಗಿಡಗಳನ್ನು ಹಚ್ಚಿರುತ್ತೀರಿ. ಆ ಗಿಡಗಳ ಸುತ್ತಮುತ್ತಲಿನ ಜಾಗದಲ್ಲಿ ಬೆಳೆಯುತ್ತಿರುವ ಇನ್ನಿತರ ಯಾವುದೇ ಸಸ್ಯಗಳು ಕ್ರಮೇಣ ಸತ್ತು ಹೋಗುತ್ತವೆ, ಅಥವಾ ಯಾವುದೇ ಹೊಸ ಸಸ್ಯಗಳು ಅದರ ಅಡಿಯಲ್ಲಿ ಬೆಳೆಯುವುದುದಿಲ್ಲ. ಇದನ್ನು ಗಮನಿಸಿದ್ದೀರಾ? ಇದಕ್ಕೆ ಕಾರಣ ಸಸ್ಯಗಳಲ್ಲಿ ನಡೆಯುವ ರಾಸಾಯನಿಕ ಸಮರ! ಅಂದರೆ ಕೆಲವು ಸಸ್ಯಗಳು ನಿಷೇಧಕ ರಾಶಯನಿಕಗಳನ್ನು ತಯಾರಿಸಿ ಇನ್ನಿತರ ಸಸ್ಯಗಳ ಬೆಳವಣಿಗೆಗೆ ಅಡ್ಡಿಯನ್ನುಂಟು ಮಾಡುತ್ತವೆ.

ಕಳೆನಾಶಕ ರಸಾಯನ
ಸಸ್ಯಗಳಲ್ಲಿ ದ್ವಿತೀಯಕ ಪದಾರ್ಥಗಳು ಉತ್ಪತ್ತಿಯಾಗುತ್ತವಷ್ಟೇ. ಅವು ಬೇರು ಅಥವಾ ಎಲೆಗಳ ಮುಖಾಂತರ ಮಣ್ಣನ್ನು ಸೇರುತ್ತವೆ. ಅಲ್ಲಿ ಕಳೆನಾಶಕ ರಸಾಯನದ ಹಾಗೆ ವರ್ತಿಸುತ್ತವೆ.

ಅಕ್ರೋಡ ಗಿಡದ ಸುತ್ತಮುತ್ತಲಿನ ಸಸ್ಯಗಳು ಮತ್ತು ಹುಲ್ಲು ಸರಿಯಾಗಿ ಏಕೆ ಬೆಳೆಯುತ್ತಿಲ್ಲ ಎಂದು ವಿಜ್ಞಾನಿಗಳು ಪ್ರಶ್ನೆ ಹಾಕಿಕೊಂಡು ಸಂಶೋಧನೆ ನಡೆಸಿದರು. ಪರೀಕ್ಷಿಸಿದಾಗ ಅದರ ಎಲೆ, ತೊಗಟೆ, ಹಣ್ಣಿನ ಸಿಪ್ಪೆ ಮತ್ತಿತರ ಅಂಗಾಂಗಗಳಿಂದ ‘ಜುಗ್ಲೋನ್’ ಎಂಬ ರಾಸಾಯನಿಕ ಬೇರ್ಪಡಿಸಲಾಯಿತು. ಈ ರಾಸಾಯನಿಕ ಮಣ್ಣನ್ನು ಸೇರಿ, ಆಕ್ಸೀಡೀಕರಣವಾಗಿ ಇತರ ಸಸ್ಯಗಳ ಬೆಳವಣಿಗೆ ಕುಂಠಿತಗೊಳಿಸಿತ್ತು.

ಮಣ್ಣಿಗೆ ಆವಿಶೀಲ ತೈಲ
ಸಾಲ್ವಿಯಾ ಜಾತಿಯ ಮರಗಳ ಎಲೆಗಳು ನೆಲಕ್ಕೆ ಬಿದ್ದಾಗ ಆವಿಶೀಲ ತೈಲವನ್ನು ಮಣ್ಣಿಗೆ ಬಿಡುತ್ತವೆ. ಅದು ಇನ್ನಿತರ ಸಸ್ಯಗಳ ಬೀಜಗಳು ಮೊಳಕೆಒಡೆಯದ ಹಾಗೆ ತಡೆ ಒಡ್ಡುತ್ತವೆ. ಕ್ಲಿರೋಡೆಂಡ್ರಾನ್ ಸಸ್ಯವು ವಿಸರ್ಜಿಸುವ ರಾಸಾಯನಿಕದಿಂದ ತುರುಬಿಗಿಡ, ಮುಳ್ಳ ಕೀರೆ ಸೊಪ್ಪು, ಚಗಚಿ ಇತ್ಯಾದಿ ಸಸ್ಯಗಳು ಒಣಗಿಹೋಗುತ್ತವೆ. ಪಾರ್ಥೇನಿಯಂ, ಆಡನ್‌ಸೋನಿಯ ಮತ್ತಿತರ ಸಸ್ಯಗಳೂ ರಾಸಾಯನಿಕಗಳನ್ನು ವಿಸರ್ಜಿಸುತ್ತವೆ.

ಮಣ್ಣಿನಲ್ಲಿರುವ ಪೆನಿಸಿಲಿಯಂ ಶಿಲೀಂಧ್ರ ಪ್ರತಿ ಜೈವಿಕ ಪದಾರ್ಥ ಉತ್ಪತ್ತಿ ಮಾಡಿ ಬಿಡುಗಡೆ ಮಾಡುತ್ತದೆ. ಅದರಿಂದ ಅನೇಕ ಬ್ಯಾಕ್ಟೀರಿಯಾ ಪ್ರಭೇದಗಳು ನಾಶವಾಗುತ್ತವೆ. ಹೀಗೆ ಸಸ್ಯಗಳು ಒಸರುವ ರಾಸಾಯನಿಕಗಳಲ್ಲಿ ಕೆಲವನ್ನು ಮಾತ್ರ ಗುರುತಿಸಲಾಗಿದೆ. ಅವು ಫಿನೋಲಿಕ್ ಆಮ್ಲ, ಲ್ಯಾಕ್ಟೋನ್‌ಗಳು, ಕ್ಯಾಂಫರ್‍, ನಾರಿಂಗಿನಿನ್, ಸ್ಕೇಲಿನ್, ಆರ್ಬುಟಿವ್ ಇತ್ಯಾದಿ. ಗುರುತಿಸಲಾಗದ ಅನೇಕ ರಾಸಾಯನಿಕಗಳು ಸವಾಲಾಗಿ ನಿಂತಿವೆ. ಸಸ್ಯಗಳು ವಿಸರ್ಜಿಸುವ ರಾಸಾಯನಿಕವು ಒಂದು ಸಸ್ಯದ ಬೆಳವಣಿಗೆಯನ್ನು ಕುಂಠಿತಗೊಳಿಸಿದರೆ ಇನ್ನೊಂದರ ಬೆಳವಣಿಗೆ ಶೀಘ್ರಗೊಳಿಸಲೂಬಹುದು!

ಸಸ್ಯಗಳು ರಾಸಾಯನಿಕ ಸಮರದಿಂದ ತಮ್ಮ ವೈರಿಯನ್ನು ಹೀಗೆ ಹತೋಟಿಯಲ್ಲಿಡುತ್ತವೆ. ಇದು ವಿನಾಶಕಾರಿ ಕಳೆ ಗಿಡಗಳನ್ನು ನಿಯಂತ್ರಿಸಲು ಹೊಸದೊಂದು ಪರಿಣಾಮಕಾರಿ ರಾಸಾಯನಿಕಗಳ ಆವಿಷ್ಕಾರಕ್ಕೆ ನಾಂದಿ ಆಗಬಹುದು.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...