ಕನ್ನಡದ ಏಳಿಗೆ

ಕನ್ನಡದ ತಿಳಿನೀರ ನಾನೊಂದು ಬೊಗಸೆಯಲಿ
ಕುಡಿದು ನೋಡಿದೆನದರ ಸವಿಯನ್ನು ನಾನೊ;
ಕುಡಿಕುಡಿದು ಮುದವಾಂತು ನಲ್ಗಬ್ಬ ಸಾರವನು
ಬಾಯ್ದುದಿಯೊಳನವರತ ಇರಿಸಲೆಳಸಿದೆನೊ!

ಎಷ್ಟು ತತ್ವದ ಗೀತ?  ಎಷ್ಟು ಮೋಹದ ಮಾತು?
ವಚನರಾಶಿಯ ಸಾರ, ಪುರಾಣಗಳ ಮೇಳ!
ಗದ್ಯ ಪದ್ಯದ ವಾದ, ಶರಣ ಹಾಡಿನ ನಾದ;
ಕನ್ನಡಾಂಬೆಯ ಕೊರಳ ಮುತ್ತುಮಣಿ ಮಾಲಾ-

ವೃತ್ತಕಂದಗಳೋಟ, ಚಂಪುಕಾವ್ಯದ ಕೂಟ,
‘ಝೇಂಕರಿಪ ಷಟ್ಪದಿ’ಗಳಾ ವೇಗ ಮಾರ್ಗ;
ಶಾಸ್ತ್ರಗ್ರಂಥದ ಸಾಲು, ವ್ಯಾಕರಣಗಳ ಬಾಳು,
ಹಾಸು ಹೊಕ್ಕಾಗಿಯೇ ತಾಳಿ ಬಾಳಿದೆ ಕೇಳ!

ದಾಸ ಪದಗಳು ಹರಡಿ ಹಳ್ಳಿ ಜನಗಳು ಉಬ್ಬಿ
ಲಾವಣಿಗಳಾ ದನಿಯ ಇಂಪಿನಿಂ ಹಿಗ್ಗಿ;
ಹೊಸಕವನ ಕೊಳದ ದನಿ, ಶ್ರೋತೃಗಳ ಬಿಲ್ಲದನಿ,
ಕನ್ನಡದ ಹಲತರದಲೇಳಿಗೆಯ ಸುಗ್ಗಿ!

ದಶಮಾನ ಶತವಾಗಿ, ಶತಮಾನ ದಶವಾಗಿ
ತಿಳಿನೀರ ಬುಗ್ಗೆಯದು ಎಷ್ಟು ಸಿಹಿ ಚೆಲುವು!
ತಿಳಿಯದಿಹ ಕವಿವರ್ಯರೇಸು ಜನ ಏತರದಿ
ಕನ್ನಡದ ತೋಟದಲಿ ಬೆಳೆಸಿದರು ಹೂವು!!

ಆಳಿದರು ಚೋಳ ಚಾಳುಕ್ಯ ಗಂಗ ಕದಂಬ
ವಿಜಯನಗರದ ರಾಜ್ಯ ವೈಭವದ ಗೂಡು;
ನೃಪತುಂಗ ಪಂಪರೂ ಪೊನ್ನರನ್ನರ ತಂಡ
ಗುಣವರ್ಮ ಆ ಜನ್ನ ನಾಗಚಂದ್ರರ ದಂಡು.

ಲಕ್ಷಣವ ಸಾರಿದ ಸಾಳ್ವ ಭಟ್ಟಾಕಳಂಕರು
ಕೇಶಿರಾಜರದಂತು ನಾಗವರ್ಮರದೊ!
ತಾಯಂದಿರಾ ಕಂತಿ ಅಕ್ಕದೇವಿಯರಿಹರು
ಕನ್ನಡಿತಿ ಹೊನ್ನಮ್ಮ ಕವಿಕೋಕಿಲವಳೊ!

ಮಧ್ಯಯುಗ ಬಸವಣ್ಣ ರಾಘವಾಂಕರ ಸಾಲು
ವ್ಯಾಸಕುವರನ ಒಂದು ಭಾರತದ ಹಾಡೊ;
ಪದ್ಮರಸ ಲಕ್ಷ್ಮೇಶ ತಿಮ್ಮಕವಿ ಹರಿಹರರು
ಕವಿವರರು ಅಗಣಿತವೆ ಕನ್ನಡದ ಬಾಳೊ!

ಷಡಕ್ಷರಿಯ ಬಿರುನುಡಿಯು, ಮುದ್ದಣನ ಇನಿವಾತು
ಕನಕಾಪುರಂದರರ ಲಲ್ಲೆ ಹಾಡಿನ ನುಣ್ಪು;
ಕೃಷ್ಣರಾಜರ ಸೇವೆ, ತಿರುಮಲಾರ್‍ಯರ ಸೊಲ್ಲು
ಒಡನಾಡಿ ಬಳೆಯಿತೊ ಕನ್ನಡದ ಹುರುಪು

ನೃಸಿಂಹ ಅಳಸಿಂಗರ ವಿದ್ವತ್ಸೇವೆಯ ಮೇರೆ
ಬಸಪ್ಪಶಾಸ್ತ್ರಿಗಳೊ ಪಂಜೇ ಶ್ರೀಕಂಠರು!
ಹಲವಾರು ನುಡಿಸೇವೆ ಸ್ಪೂರ್ತಿಯಿಕ್ಕಿದ ಜನವೆ
ಕಣ್ಮುಂದು ನಿಲ್ಲುವರು ಇನ್ನು ಬಾಳುವರು!

ಕನ್ನಡದ ಕರ್ಣಾಟಕಿಂದು ಅಂದಿನದಂತೆ
ಒಂದಾಗಿ ಇಲ್ಲವೆಂದೊಕ್ಕೊರಲ ಕೂಗು,
ಒಂದಾಪ ಸವಿಗನಸು ಕಾಣಲಿವೆ ಅದರಂತೆ
ನುಡಿಸೇವೆ ವೃಂದದಾ ಉತ್ಸುಕದ ದಂಡು!

ಮೈಸೂರು ಮಂಗ್ಳೂರು ಧಾರ್ವಾಡ ಎಂದೆಂದು
ಸೀಮಾ ಮಹತ್ವವನು ಕೊಟ್ಟು ಮೂಲೆಯೊಳಿರಿಸಿ,
ಕನ್ನಡಾಂಬೆಯ ಕುವರರಂದಿನಾ ಪ್ರಭೆಯೊಂದು
ಮಾಸಿಹೋಗಿದೆ ಇಂದು ಚೈತನ್ಯವಳಿಸಿ!

ಕವನಗಳ ಕಂತೆಗಳು, ಸಣ್ಣ ಕಥೆ ಬೊಂತೆಗಳು,
ಹಲಕಾದಂಬರಿಗಳೂ ತುಂಬುವುದು ಹಿತವೆ!
ಭಾಷಾಭಿಮಾನವೂ ಸ್ವಜನಾನುರಾಗವೂ
ಬಳೆಯುತ್ತಿವೆ ಜನರಲ್ಲಿ ಫಲಬಿಟ್ಟಿವೆ!!
*     *     *

ನನ್ನಿಚ್ಚೆ, ನನ್ಗನಸು, ನನ್ನೊಲುಮೆ ಇದು ಒಂದು-
ಕನ್ನಡವು ಭಾರತದ ಹಸುಗೂಸಂತಿರದೆ;
ಮುನ್ನಡೆವೆ ಮುನ್ನೋಡ್ವ ಘನಭಾಷೆಯೆಂದೆನಿಸಿ
ಬಾಳಲೆಂಬುವ ಕಾಂಕ್ಷೆ ಮುನ್ನಿಟ್ಟು ನಡೆವೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೧
Next post ದೀಪಾವಳಿ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys