Home / ಕವನ / ಕವಿತೆ / ಸಮತಾವಾದ

ಸಮತಾವಾದ

ಭೂಮಿಯ ಒಡೆತನ
ಒಬ್ಬನಿಗಾಗಲು
ಬಾಳಿನ ಬೇಗುದಿ ಒಬ್ಬನಿಗೆ
ಐಸಿರಿಯೊಬ್ಬಗೆ
ಶರಣಾಗಲು ಇಹ
ಲೋಕವೆ ಅಸಮತೆ ಬೀಡಹುದು.

ರಾಜನ ಸಂಪದ
ಸಿರಿವಂತನ ಗೆಲು
ನೋಡುತ ಸಾಸಿರ ಜನವೃಂದ
ಬೆರಗಲಿ ಕುಳಿತೂ
ತಮ್ಮಯ ಪಾಡನು
ನುಂಗುತ ಕರಗುತ ಕಳೆಯುತ್ತ.

ಸಾಹಸ ಬಾಳಿಗೆ
ದೈವಿಕ ಸುಖಕೆ
ಪಾತ್ರರು ಅಲ್ಲವೆ ಜನಕೋಟಿ?
ಕಲ್ಪಿತ ವ್ಯಸನಕೆ
ಮಾಡಿದ ಕರ್ಮಕೆ
ಅಂತ್ಯವು ಇಲ್ಲವೆ ಈ ಜಗದಿ?

ಋತುಗಳು, ಕಾಲವು
ಸೂರ್ಯನು, ಚಂದ್ರನು,
ಪ್ರಕೃತಿಯೆಲ್ಲವು ಸಮವಾಗಿ
ಕ್ರಿಮಿಯಿಂದೊಡಗಿದ
ವಿಶ್ವ ಸರ್‍ವಸ್ವಕೆ
ಒದಗಿದ ಸುಖವನು ಕ್ರಮವಾಗಿ-

ಈಯಲು ಮಾನವ-
ಗಣದಲಿ ಬಹುವಿಧ
ಏತಕೊ ಬಂದಿತು-ಎಲ್ಲಿಂದ?
ಅಸಮಾಧಾನದ
ಮನಸನು ಕೊರೆಯುವ
ಕೀಟವೆ ಇಂದಿನ ಈ ಭೇದ.

ಜನ ಸಮಾಜದಿ
ರಾಜನು ಋಷಿಗಳು
ರಕ್ಕಸ ಬಲ್ಲಿದ ಬಡವನೆಂದು
ರೂಪಿಗೆ ವರ್ಣಕೆ
ಹೋಲುವ ಸ್ಥಿತಿಯಲಿ
ಕೋಟ್ಯಾದಿ ವಿಧ ಜೀವನವು.

ರಷ್ಯಾದೇಶದ
ಭೀಕರ ಕ್ರಾಂತಿಯು
ಫ್ರಾನ್ಸಿನ ವಿಪ್ಲವದಾ ಪರಿಯ
ಹೆಬ್ಬುಲಿ ತನ್ನಯ
ಪ್ರಾಣಕೆ ಹಾರುವ
ತೆರವಿದೊ ಜೀವನದತೃಪ್ತಿ.

ದೇಶದ ಋಣವನು
ರಾಜನ ಹೊಟ್ಟೆಲಿ;
ಕಾಡದು ಬೇಡನ ಬಲೆಯಲ್ಲಿ.
ಬಡವನ ಕೈಗಳು
ಧನಿಕನ ಜೇಬಲಿ
ಕಾಳ್ಗಳು ಹೆಗ್ಗಣ ಬಿಲದಲ್ಲಿ.

ಸುಭಿಕ್ಷಾವಾದವ-
ದಿಲ್ಲದೆ ಲೋಕವು
ಅನ್ನದ ಸಮರವೆ-ಅನ್ಯಾಯ!
ಮಣ್ಣಿನ ಪಾಪವು
ಬ್ರಹ್ಮನ ನೀತಿಯು
ಸುಟ್ಟಂತಾಯಿತು ಈ ಇರವು.

ಹೇಳುವ ನೀತಿಗೆ
ಬಾಯಲಿ ಸ್ಥಾನವು
ಮಿನುಗುವ ಒಡವೆಗೆ ಬೆಲೆಯಿಲ್ಲ!
ಹೊನ್ನು ಹಣಗಳ
ಮೋಹಿಸಿ ನರಳದಿ-
ರೆನ್ನುವ ಹಾಡಿಗೆ ತಾಳವಿಲ್ಲ.

ಸಮತಾವಾದದ
ಕ್ರಾಂತಿಗೆ ಶರಣಾ-
ಗುವೆನಿದೊ ಮನ್ನಿಸಿ ಧರ್ಮವನು.
ಸಮತಾ ಭಾವವು
ಸಮಗುಣ ಐಕ್ಯವು
ಸರ್ವಜನ ಸುಖ ಬೆಳಗಲಿದೊ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...