Home / ಕವನ / ಕವಿತೆ / ಸಮತಾವಾದ

ಸಮತಾವಾದ

ಭೂಮಿಯ ಒಡೆತನ
ಒಬ್ಬನಿಗಾಗಲು
ಬಾಳಿನ ಬೇಗುದಿ ಒಬ್ಬನಿಗೆ
ಐಸಿರಿಯೊಬ್ಬಗೆ
ಶರಣಾಗಲು ಇಹ
ಲೋಕವೆ ಅಸಮತೆ ಬೀಡಹುದು.

ರಾಜನ ಸಂಪದ
ಸಿರಿವಂತನ ಗೆಲು
ನೋಡುತ ಸಾಸಿರ ಜನವೃಂದ
ಬೆರಗಲಿ ಕುಳಿತೂ
ತಮ್ಮಯ ಪಾಡನು
ನುಂಗುತ ಕರಗುತ ಕಳೆಯುತ್ತ.

ಸಾಹಸ ಬಾಳಿಗೆ
ದೈವಿಕ ಸುಖಕೆ
ಪಾತ್ರರು ಅಲ್ಲವೆ ಜನಕೋಟಿ?
ಕಲ್ಪಿತ ವ್ಯಸನಕೆ
ಮಾಡಿದ ಕರ್ಮಕೆ
ಅಂತ್ಯವು ಇಲ್ಲವೆ ಈ ಜಗದಿ?

ಋತುಗಳು, ಕಾಲವು
ಸೂರ್ಯನು, ಚಂದ್ರನು,
ಪ್ರಕೃತಿಯೆಲ್ಲವು ಸಮವಾಗಿ
ಕ್ರಿಮಿಯಿಂದೊಡಗಿದ
ವಿಶ್ವ ಸರ್‍ವಸ್ವಕೆ
ಒದಗಿದ ಸುಖವನು ಕ್ರಮವಾಗಿ-

ಈಯಲು ಮಾನವ-
ಗಣದಲಿ ಬಹುವಿಧ
ಏತಕೊ ಬಂದಿತು-ಎಲ್ಲಿಂದ?
ಅಸಮಾಧಾನದ
ಮನಸನು ಕೊರೆಯುವ
ಕೀಟವೆ ಇಂದಿನ ಈ ಭೇದ.

ಜನ ಸಮಾಜದಿ
ರಾಜನು ಋಷಿಗಳು
ರಕ್ಕಸ ಬಲ್ಲಿದ ಬಡವನೆಂದು
ರೂಪಿಗೆ ವರ್ಣಕೆ
ಹೋಲುವ ಸ್ಥಿತಿಯಲಿ
ಕೋಟ್ಯಾದಿ ವಿಧ ಜೀವನವು.

ರಷ್ಯಾದೇಶದ
ಭೀಕರ ಕ್ರಾಂತಿಯು
ಫ್ರಾನ್ಸಿನ ವಿಪ್ಲವದಾ ಪರಿಯ
ಹೆಬ್ಬುಲಿ ತನ್ನಯ
ಪ್ರಾಣಕೆ ಹಾರುವ
ತೆರವಿದೊ ಜೀವನದತೃಪ್ತಿ.

ದೇಶದ ಋಣವನು
ರಾಜನ ಹೊಟ್ಟೆಲಿ;
ಕಾಡದು ಬೇಡನ ಬಲೆಯಲ್ಲಿ.
ಬಡವನ ಕೈಗಳು
ಧನಿಕನ ಜೇಬಲಿ
ಕಾಳ್ಗಳು ಹೆಗ್ಗಣ ಬಿಲದಲ್ಲಿ.

ಸುಭಿಕ್ಷಾವಾದವ-
ದಿಲ್ಲದೆ ಲೋಕವು
ಅನ್ನದ ಸಮರವೆ-ಅನ್ಯಾಯ!
ಮಣ್ಣಿನ ಪಾಪವು
ಬ್ರಹ್ಮನ ನೀತಿಯು
ಸುಟ್ಟಂತಾಯಿತು ಈ ಇರವು.

ಹೇಳುವ ನೀತಿಗೆ
ಬಾಯಲಿ ಸ್ಥಾನವು
ಮಿನುಗುವ ಒಡವೆಗೆ ಬೆಲೆಯಿಲ್ಲ!
ಹೊನ್ನು ಹಣಗಳ
ಮೋಹಿಸಿ ನರಳದಿ-
ರೆನ್ನುವ ಹಾಡಿಗೆ ತಾಳವಿಲ್ಲ.

ಸಮತಾವಾದದ
ಕ್ರಾಂತಿಗೆ ಶರಣಾ-
ಗುವೆನಿದೊ ಮನ್ನಿಸಿ ಧರ್ಮವನು.
ಸಮತಾ ಭಾವವು
ಸಮಗುಣ ಐಕ್ಯವು
ಸರ್ವಜನ ಸುಖ ಬೆಳಗಲಿದೊ.
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...