Home / ಕವನ / ಕವಿತೆ / ಸಮತಾವಾದ

ಸಮತಾವಾದ

ಭೂಮಿಯ ಒಡೆತನ
ಒಬ್ಬನಿಗಾಗಲು
ಬಾಳಿನ ಬೇಗುದಿ ಒಬ್ಬನಿಗೆ
ಐಸಿರಿಯೊಬ್ಬಗೆ
ಶರಣಾಗಲು ಇಹ
ಲೋಕವೆ ಅಸಮತೆ ಬೀಡಹುದು.

ರಾಜನ ಸಂಪದ
ಸಿರಿವಂತನ ಗೆಲು
ನೋಡುತ ಸಾಸಿರ ಜನವೃಂದ
ಬೆರಗಲಿ ಕುಳಿತೂ
ತಮ್ಮಯ ಪಾಡನು
ನುಂಗುತ ಕರಗುತ ಕಳೆಯುತ್ತ.

ಸಾಹಸ ಬಾಳಿಗೆ
ದೈವಿಕ ಸುಖಕೆ
ಪಾತ್ರರು ಅಲ್ಲವೆ ಜನಕೋಟಿ?
ಕಲ್ಪಿತ ವ್ಯಸನಕೆ
ಮಾಡಿದ ಕರ್ಮಕೆ
ಅಂತ್ಯವು ಇಲ್ಲವೆ ಈ ಜಗದಿ?

ಋತುಗಳು, ಕಾಲವು
ಸೂರ್ಯನು, ಚಂದ್ರನು,
ಪ್ರಕೃತಿಯೆಲ್ಲವು ಸಮವಾಗಿ
ಕ್ರಿಮಿಯಿಂದೊಡಗಿದ
ವಿಶ್ವ ಸರ್‍ವಸ್ವಕೆ
ಒದಗಿದ ಸುಖವನು ಕ್ರಮವಾಗಿ-

ಈಯಲು ಮಾನವ-
ಗಣದಲಿ ಬಹುವಿಧ
ಏತಕೊ ಬಂದಿತು-ಎಲ್ಲಿಂದ?
ಅಸಮಾಧಾನದ
ಮನಸನು ಕೊರೆಯುವ
ಕೀಟವೆ ಇಂದಿನ ಈ ಭೇದ.

ಜನ ಸಮಾಜದಿ
ರಾಜನು ಋಷಿಗಳು
ರಕ್ಕಸ ಬಲ್ಲಿದ ಬಡವನೆಂದು
ರೂಪಿಗೆ ವರ್ಣಕೆ
ಹೋಲುವ ಸ್ಥಿತಿಯಲಿ
ಕೋಟ್ಯಾದಿ ವಿಧ ಜೀವನವು.

ರಷ್ಯಾದೇಶದ
ಭೀಕರ ಕ್ರಾಂತಿಯು
ಫ್ರಾನ್ಸಿನ ವಿಪ್ಲವದಾ ಪರಿಯ
ಹೆಬ್ಬುಲಿ ತನ್ನಯ
ಪ್ರಾಣಕೆ ಹಾರುವ
ತೆರವಿದೊ ಜೀವನದತೃಪ್ತಿ.

ದೇಶದ ಋಣವನು
ರಾಜನ ಹೊಟ್ಟೆಲಿ;
ಕಾಡದು ಬೇಡನ ಬಲೆಯಲ್ಲಿ.
ಬಡವನ ಕೈಗಳು
ಧನಿಕನ ಜೇಬಲಿ
ಕಾಳ್ಗಳು ಹೆಗ್ಗಣ ಬಿಲದಲ್ಲಿ.

ಸುಭಿಕ್ಷಾವಾದವ-
ದಿಲ್ಲದೆ ಲೋಕವು
ಅನ್ನದ ಸಮರವೆ-ಅನ್ಯಾಯ!
ಮಣ್ಣಿನ ಪಾಪವು
ಬ್ರಹ್ಮನ ನೀತಿಯು
ಸುಟ್ಟಂತಾಯಿತು ಈ ಇರವು.

ಹೇಳುವ ನೀತಿಗೆ
ಬಾಯಲಿ ಸ್ಥಾನವು
ಮಿನುಗುವ ಒಡವೆಗೆ ಬೆಲೆಯಿಲ್ಲ!
ಹೊನ್ನು ಹಣಗಳ
ಮೋಹಿಸಿ ನರಳದಿ-
ರೆನ್ನುವ ಹಾಡಿಗೆ ತಾಳವಿಲ್ಲ.

ಸಮತಾವಾದದ
ಕ್ರಾಂತಿಗೆ ಶರಣಾ-
ಗುವೆನಿದೊ ಮನ್ನಿಸಿ ಧರ್ಮವನು.
ಸಮತಾ ಭಾವವು
ಸಮಗುಣ ಐಕ್ಯವು
ಸರ್ವಜನ ಸುಖ ಬೆಳಗಲಿದೊ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...