Home / ಕವನ / ಕವಿತೆ / ಸಮತಾವಾದ

ಸಮತಾವಾದ

ಭೂಮಿಯ ಒಡೆತನ
ಒಬ್ಬನಿಗಾಗಲು
ಬಾಳಿನ ಬೇಗುದಿ ಒಬ್ಬನಿಗೆ
ಐಸಿರಿಯೊಬ್ಬಗೆ
ಶರಣಾಗಲು ಇಹ
ಲೋಕವೆ ಅಸಮತೆ ಬೀಡಹುದು.

ರಾಜನ ಸಂಪದ
ಸಿರಿವಂತನ ಗೆಲು
ನೋಡುತ ಸಾಸಿರ ಜನವೃಂದ
ಬೆರಗಲಿ ಕುಳಿತೂ
ತಮ್ಮಯ ಪಾಡನು
ನುಂಗುತ ಕರಗುತ ಕಳೆಯುತ್ತ.

ಸಾಹಸ ಬಾಳಿಗೆ
ದೈವಿಕ ಸುಖಕೆ
ಪಾತ್ರರು ಅಲ್ಲವೆ ಜನಕೋಟಿ?
ಕಲ್ಪಿತ ವ್ಯಸನಕೆ
ಮಾಡಿದ ಕರ್ಮಕೆ
ಅಂತ್ಯವು ಇಲ್ಲವೆ ಈ ಜಗದಿ?

ಋತುಗಳು, ಕಾಲವು
ಸೂರ್ಯನು, ಚಂದ್ರನು,
ಪ್ರಕೃತಿಯೆಲ್ಲವು ಸಮವಾಗಿ
ಕ್ರಿಮಿಯಿಂದೊಡಗಿದ
ವಿಶ್ವ ಸರ್‍ವಸ್ವಕೆ
ಒದಗಿದ ಸುಖವನು ಕ್ರಮವಾಗಿ-

ಈಯಲು ಮಾನವ-
ಗಣದಲಿ ಬಹುವಿಧ
ಏತಕೊ ಬಂದಿತು-ಎಲ್ಲಿಂದ?
ಅಸಮಾಧಾನದ
ಮನಸನು ಕೊರೆಯುವ
ಕೀಟವೆ ಇಂದಿನ ಈ ಭೇದ.

ಜನ ಸಮಾಜದಿ
ರಾಜನು ಋಷಿಗಳು
ರಕ್ಕಸ ಬಲ್ಲಿದ ಬಡವನೆಂದು
ರೂಪಿಗೆ ವರ್ಣಕೆ
ಹೋಲುವ ಸ್ಥಿತಿಯಲಿ
ಕೋಟ್ಯಾದಿ ವಿಧ ಜೀವನವು.

ರಷ್ಯಾದೇಶದ
ಭೀಕರ ಕ್ರಾಂತಿಯು
ಫ್ರಾನ್ಸಿನ ವಿಪ್ಲವದಾ ಪರಿಯ
ಹೆಬ್ಬುಲಿ ತನ್ನಯ
ಪ್ರಾಣಕೆ ಹಾರುವ
ತೆರವಿದೊ ಜೀವನದತೃಪ್ತಿ.

ದೇಶದ ಋಣವನು
ರಾಜನ ಹೊಟ್ಟೆಲಿ;
ಕಾಡದು ಬೇಡನ ಬಲೆಯಲ್ಲಿ.
ಬಡವನ ಕೈಗಳು
ಧನಿಕನ ಜೇಬಲಿ
ಕಾಳ್ಗಳು ಹೆಗ್ಗಣ ಬಿಲದಲ್ಲಿ.

ಸುಭಿಕ್ಷಾವಾದವ-
ದಿಲ್ಲದೆ ಲೋಕವು
ಅನ್ನದ ಸಮರವೆ-ಅನ್ಯಾಯ!
ಮಣ್ಣಿನ ಪಾಪವು
ಬ್ರಹ್ಮನ ನೀತಿಯು
ಸುಟ್ಟಂತಾಯಿತು ಈ ಇರವು.

ಹೇಳುವ ನೀತಿಗೆ
ಬಾಯಲಿ ಸ್ಥಾನವು
ಮಿನುಗುವ ಒಡವೆಗೆ ಬೆಲೆಯಿಲ್ಲ!
ಹೊನ್ನು ಹಣಗಳ
ಮೋಹಿಸಿ ನರಳದಿ-
ರೆನ್ನುವ ಹಾಡಿಗೆ ತಾಳವಿಲ್ಲ.

ಸಮತಾವಾದದ
ಕ್ರಾಂತಿಗೆ ಶರಣಾ-
ಗುವೆನಿದೊ ಮನ್ನಿಸಿ ಧರ್ಮವನು.
ಸಮತಾ ಭಾವವು
ಸಮಗುಣ ಐಕ್ಯವು
ಸರ್ವಜನ ಸುಖ ಬೆಳಗಲಿದೊ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...