ಕಣ್ಕಾಪು ಬಿಗಿದ ಕುದುರೆ

ಇಲ್ಲ ಅಕ್ಕಪಕ್ಕದ ಪರಿವೆ
ಬೇಕಿಲ್ಲ ಕಣ್ಕಾಪಿನಾಚೆಯ ಗೊಡವೆ

ಉದ್ದಾನು ಉದ್ದ ಕಣ್ಣು ಹಾಯ್ದಷ್ಟು ದೂರ
ದಾರಿ ಮಲಗಿದೆ ಹೀಗೇ… ನೇರ
ಏರುಪೇರಿಲ್ಲ. ಅಡೆತಡೆಗಳೂ ಇಲ್ಲ
ಚೌಕಟ್ಟು ಮೀರಿ ನೋಡುವಂತಿಲ್ಲ

ತನ್ನ ಪರಿಧಿಯೊಳಗೆ ಕಂಡದ್ದೇ ಸತ್ಯ
ಮಿಕ್ಕಿದ್ದೆಲ್ಲವೂ ಮಿಥ್ಯ!

ಖುರಪುಟದಡಿಯಲ್ಲಿ ನಲುಗಿದ ಹುಲ್ಲು
ಬೆಚ್ಚಿ ನಿದ್ದೆಯಿಂದೆದ್ದ ಕಲ್ಲು

ತನ್ನ ಘನಕಾರ್ಯದ ಗಮ್ಮತ್ತು
ಮೂಡಿತ್ತು ಮೀಸೆಯಡಿಯಲ್ಲಿ ಗತ್ತು!

ಯಾರಿತ್ತ ಶಾಪವೋ?
ಯಾರ ಕೋಪವೋ?

ಜಾರಿತ್ತು ಒಂದೊಂದೇ ಹನಿ ಕಣ್ಣೀರು
ಅಲ್ಲಲ್ಲಾ ಪನ್ನೀರು!

ಕಣ್ಕಾಪು ಪಾರದರ್ಶಕವಾಗಿ ತೊಯ್ದಿತ್ತು
ಕುದುರೆ ವಿಶ್ವದರ್ಶನ ಮಾಡಿತ್ತು

‘ದಾರಿಯಾಚೆಗಿನ ಬದುಕು ಕದ್ದವರೇ
ನನ್ನ ಕನಸು ಕದಿಯುವಿರೇ?’

ಬಡಬಡಿಸಿ ಕೆನೆಕೆನೆದು ನಕ್ಕಿತ್ತು
ಕಣ್ಕಾಪು ಬಿಗಿದ ಕುದುರೆ ಸದ್ದಿಲ್ಲದೇ ಬಿಕ್ಕಿತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಕ್ಸಲ್ಲೈಟು
Next post ನೀ ಹೀಗೆ ಇರಬಾರದೆ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys