ಕಣ್ಕಾಪು ಬಿಗಿದ ಕುದುರೆ

ಇಲ್ಲ ಅಕ್ಕಪಕ್ಕದ ಪರಿವೆ
ಬೇಕಿಲ್ಲ ಕಣ್ಕಾಪಿನಾಚೆಯ ಗೊಡವೆ

ಉದ್ದಾನು ಉದ್ದ ಕಣ್ಣು ಹಾಯ್ದಷ್ಟು ದೂರ
ದಾರಿ ಮಲಗಿದೆ ಹೀಗೇ… ನೇರ
ಏರುಪೇರಿಲ್ಲ. ಅಡೆತಡೆಗಳೂ ಇಲ್ಲ
ಚೌಕಟ್ಟು ಮೀರಿ ನೋಡುವಂತಿಲ್ಲ

ತನ್ನ ಪರಿಧಿಯೊಳಗೆ ಕಂಡದ್ದೇ ಸತ್ಯ
ಮಿಕ್ಕಿದ್ದೆಲ್ಲವೂ ಮಿಥ್ಯ!

ಖುರಪುಟದಡಿಯಲ್ಲಿ ನಲುಗಿದ ಹುಲ್ಲು
ಬೆಚ್ಚಿ ನಿದ್ದೆಯಿಂದೆದ್ದ ಕಲ್ಲು

ತನ್ನ ಘನಕಾರ್ಯದ ಗಮ್ಮತ್ತು
ಮೂಡಿತ್ತು ಮೀಸೆಯಡಿಯಲ್ಲಿ ಗತ್ತು!

ಯಾರಿತ್ತ ಶಾಪವೋ?
ಯಾರ ಕೋಪವೋ?

ಜಾರಿತ್ತು ಒಂದೊಂದೇ ಹನಿ ಕಣ್ಣೀರು
ಅಲ್ಲಲ್ಲಾ ಪನ್ನೀರು!

ಕಣ್ಕಾಪು ಪಾರದರ್ಶಕವಾಗಿ ತೊಯ್ದಿತ್ತು
ಕುದುರೆ ವಿಶ್ವದರ್ಶನ ಮಾಡಿತ್ತು

‘ದಾರಿಯಾಚೆಗಿನ ಬದುಕು ಕದ್ದವರೇ
ನನ್ನ ಕನಸು ಕದಿಯುವಿರೇ?’

ಬಡಬಡಿಸಿ ಕೆನೆಕೆನೆದು ನಕ್ಕಿತ್ತು
ಕಣ್ಕಾಪು ಬಿಗಿದ ಕುದುರೆ ಸದ್ದಿಲ್ಲದೇ ಬಿಕ್ಕಿತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಕ್ಸಲ್ಲೈಟು
Next post ನೀ ಹೀಗೆ ಇರಬಾರದೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…