Home / ಕವನ / ಕವಿತೆ / ಭಗ್ನ ಹೃದಯ

ಭಗ್ನ ಹೃದಯ

ತ್ರಿಪುರ ದಹನವದಾಯ್ತು ಲಂಕೆಯನು ಸುಟ್ಟಾಯ್ತು
ಎನಿತೆನಿತೊ ರಾಜ್ಯಗಳು ಭಷ್ಮವಾದೊ!
ಚಾರಿತ್ರ್‍ಯ ಲೇಖಕನ ಅಂಕೆಸಂಕೆಗಳೆಲ್ಲ
ತೋರುವುವು ಭಸ್ಮಾಸುರ ಮಹತ್ವವ!!

ಯಾರ ಕಾಣಿಪುದೆಂತು, ಯಾರು ನೋಡುವರೆಂತು
ಬೆಂದ ಹೃದಯದ ತಾಪ-ಶೂಲಭೂತ!
ಜೀವಧಾರಣನಾತ ಭವ್ಯಜೀವಿಯು ನೋಡೆ
ಫಲಿತ ಫಲದೊಳಗಿರುವ ಹುಳದ ರೂಪ.

ಘೋರ ಕಾನನದಲ್ಲಿ ಪ್ರಕೃತಿ ದೇವಿಯ ವಾಸ,
ಸೊಗಸಿನಾಗರ, ಹಸುರು ಬೀಡು ಕಾಡು
ಕಾನನದ ನಡುದಾರಿ ಸರ್ಪಗಳ ಆವಾಸ
ಸೊಗಸು ಬನ ಹೃದಯದಾ ರೀತಿ ಎಂತೊ!

ರಾಜ ಬೀದಿಯು ನೋಡೆ, ಭವ್ಯ ಮಂದಿರ ಸಾಲು
ನಾಗರಿಕರಾಂತಂತ ದಳಿತ ಜನವೊ!
ಆದರೊಂದು ನಡುವಲ್ಲಿ ವಿಟಜನರ ವ್ಯವಹಾರ
ಕಟುಕರಲ್ಲಲ್ಲಿ ನೋಡೆ-ಸುಖವಿದೆಂತೊ!

ಮುಗುಳುನಗೆ ಮುಖದಲ್ಲಿ ಒಯ್ಯಾರ ತನುವಿನಲಿ
ಅಟ್ಟಹಾಸದ ನಡೆಯು, ತೇಜ ಪೂಜ್ಯ-
ತನ್ನೊಂದು ಭಗ್ನತೆಯ ಆತನಲ್ಲದೆ ಯಾರು
ಅಳೆದು ನೋಡಲು ಸಾಧ್ಯ-ತಿಳಿಯೆ ನಿಜವ!

ಎಲ್ಲೆರೆಲ್ಲರ ನೆಚ್ಚಿ ತನ್ನ ತನ್ನವರೆಂದು
ನಿರಾಶೆ ಜಾಲದ ಜಾಡ್ಯದೊಳ ನುಗ್ಗಿ ಬಗ್ಗಿ;
ಭಗ್ನ ಹೃದಯದ ತಾಪ ಬೆಂದ ದೇಹದ ರೂಪ
ಯಾರೊಡನೆ ಪೇಳಲದೊ, ಕೇಳ್ವರಾರೊ?
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...