Home / ಕವನ / ಕವಿತೆ / ಭಗ್ನ ಹೃದಯ

ಭಗ್ನ ಹೃದಯ

ತ್ರಿಪುರ ದಹನವದಾಯ್ತು ಲಂಕೆಯನು ಸುಟ್ಟಾಯ್ತು
ಎನಿತೆನಿತೊ ರಾಜ್ಯಗಳು ಭಷ್ಮವಾದೊ!
ಚಾರಿತ್ರ್‍ಯ ಲೇಖಕನ ಅಂಕೆಸಂಕೆಗಳೆಲ್ಲ
ತೋರುವುವು ಭಸ್ಮಾಸುರ ಮಹತ್ವವ!!

ಯಾರ ಕಾಣಿಪುದೆಂತು, ಯಾರು ನೋಡುವರೆಂತು
ಬೆಂದ ಹೃದಯದ ತಾಪ-ಶೂಲಭೂತ!
ಜೀವಧಾರಣನಾತ ಭವ್ಯಜೀವಿಯು ನೋಡೆ
ಫಲಿತ ಫಲದೊಳಗಿರುವ ಹುಳದ ರೂಪ.

ಘೋರ ಕಾನನದಲ್ಲಿ ಪ್ರಕೃತಿ ದೇವಿಯ ವಾಸ,
ಸೊಗಸಿನಾಗರ, ಹಸುರು ಬೀಡು ಕಾಡು
ಕಾನನದ ನಡುದಾರಿ ಸರ್ಪಗಳ ಆವಾಸ
ಸೊಗಸು ಬನ ಹೃದಯದಾ ರೀತಿ ಎಂತೊ!

ರಾಜ ಬೀದಿಯು ನೋಡೆ, ಭವ್ಯ ಮಂದಿರ ಸಾಲು
ನಾಗರಿಕರಾಂತಂತ ದಳಿತ ಜನವೊ!
ಆದರೊಂದು ನಡುವಲ್ಲಿ ವಿಟಜನರ ವ್ಯವಹಾರ
ಕಟುಕರಲ್ಲಲ್ಲಿ ನೋಡೆ-ಸುಖವಿದೆಂತೊ!

ಮುಗುಳುನಗೆ ಮುಖದಲ್ಲಿ ಒಯ್ಯಾರ ತನುವಿನಲಿ
ಅಟ್ಟಹಾಸದ ನಡೆಯು, ತೇಜ ಪೂಜ್ಯ-
ತನ್ನೊಂದು ಭಗ್ನತೆಯ ಆತನಲ್ಲದೆ ಯಾರು
ಅಳೆದು ನೋಡಲು ಸಾಧ್ಯ-ತಿಳಿಯೆ ನಿಜವ!

ಎಲ್ಲೆರೆಲ್ಲರ ನೆಚ್ಚಿ ತನ್ನ ತನ್ನವರೆಂದು
ನಿರಾಶೆ ಜಾಲದ ಜಾಡ್ಯದೊಳ ನುಗ್ಗಿ ಬಗ್ಗಿ;
ಭಗ್ನ ಹೃದಯದ ತಾಪ ಬೆಂದ ದೇಹದ ರೂಪ
ಯಾರೊಡನೆ ಪೇಳಲದೊ, ಕೇಳ್ವರಾರೊ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...