Home / ಕವನ / ಕವಿತೆ / ಪ್ರಾಚೀನ

ಪ್ರಾಚೀನ

ಮಣ್ಣಿನ ಮಡಿಕೆ ಕುಡಿಕೆ
ಕಲಾಯಿ ಇಲ್ಲದೇ ಅಟ್ಟಕ್ಕೇರಿದ
ಹಿತ್ತಾಳೆ ತಾಮ್ರದ ಪಾತ್ರೆ

ಮುತ್ತಜ್ಜ ಅಜ್ಜ ಅಪ್ಪ
ಮತ್ತಿನ್ಯಾರೋ ಮಲಗೆದ್ದ
ತೊಟ್ಟಿಲು ಉಯ್ಯಾಲೆ
ಭೂತಾಕಾರದ ಮಂಚ
ಮೂಲೆಯಲಿ ತೂಗುವ ಕಂದೀಲು,
ಮುಖ ಕಾಣದ ಕನ್ನಡಿ
ಪ್ರಾಚ್ಯ ವಸ್ತು ಸಂಗ್ರಹದ ಸರಕು
ತಲೆತಲಾಂತರದಿಂದ ಬಂದ ಮುರುಕು
ಉಪಯೋಗಕ್ಕೆ ಬರುವಂತಿಲ್ಲ
ಉಪಯೋಗಿಸದೇ ಇರುವಂತಿಲ್ಲ.

ಅಪ್ಪ? ಅಲ್ಲಲ್ಲ ಅಜ್ಜ? ಅಲ್ಲ
ಮುತ್ತಜ್ಜ ಅಥವ ಅವನಜ್ಜ ನೆಟ್ಟ ಆಲ
ದಪ್ಪ ಬಿಳಲುಗಳಾಗಿ ಭೂಮಿ ಕೊರೆದು
ಈಗ ಬೇರಾವುದೋ ಬಿಳಲಾವುದೋ
ಎಲ್ಲ ಅಯೋಮಯ

ಒಂದೊಂದು ವಸ್ತುವಿನೊಂದಿಗೂ
ಒಂದೊಂದು ಹಳೆಮುಖಗಳು
ತಳುಕು ಹಾಕಿಕೊಂಡು ಎಲ್ಲಾ
ಸಿಕ್ಕಷ್ಟಕ್ಕೇ ಸೀದು
ಕೈ ತೊಳೆಯೋಣವೆಂದರೆ
ಕಳೆದುಹೋದ ಆತ್ಮಗಳು
ಕಣ್ಮುಂದೆ ಸುಳಿದು
ವೈಭವದ ಗತ ಇತಿಹಾಸ ಸಾರುತ್ತಾ
ಗಿರ್‍ರನೆ ರಾಟವಾಳ ಸುತ್ತಿದಂತೆ
ಮನಮಂದಿರದಲ್ಲಿ ನೆನಪುಗಳ ಸರಮಾಲೆ
ಹಳೆಬೇರು ಕಿತ್ತರೆ? ಹೊಸಚಿಗುರು ನೆಟ್ಟರೆ?
ತುಮುಲಗಳ ಒಡಲೊಳಗೆ
ಹಳೆಪಳೆ ಮುರುಕುಗಳೊಳಗೆ
ನನ್ನದೇ ಪ್ರತಿರೂಪ
ಥಟ್ಟನೆ ಕಂಡಂತಾಗಿ,

ಬಹುಶಃ ಹಿರಿಯ ಆತ್ಮಗಳು ಆಲನೆಟ್ಟಿದ್ದು
ನೇಣಿಗಲ್ಲ ಉಯ್ಯಾಲೆ ಜೀಕಲು
ಬೇಕೆಂದರೆ ಎಲ್ಲಾ ಬೇಕು
ಬೇಡೆಂದರೆ ಏನೂ ಬೇಡ!

ನೆನ್ನೆಯವರಿಗೆ ರಸ,
ಇಂದಿಗೆ ಕಸ
ಇಂದಿನ ನಮ್ಮ ಹಾಸು
ನಾಳಿನವರಿಗೆ ಕಾಲೊರೆಸು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...