Home / ಕವನ / ಕವಿತೆ / ಅಶರೀರ ಜೀವ

ಅಶರೀರ ಜೀವ

ಹಲವುಳಿದ ಅಶರೀರ ಹೆಣ್ಣು ಭ್ರೂಣಗಳ ಆಕ್ರಂದನ
ಮಿಡಿವ ಎದೆ ನರಳಿ, ಮಿಕ್ಕವರಿಗೆ ಖಾಲಿ ಮೌನ
ಅಮ್ಮಾ… ಅಮ್ಮಾ… ಗಾಳಿಯೊಡಲು ಸೀಳಿ
ತೇಲಿ ಬರುವ ನೂರಾರು ಹೆಣ್ಣು ಉಲಿ.

ಗರ್ಭದೊಳಗೇ ಜೀವ ಅಸ್ಪಷ್ಟ ರೂಪವಾದಂತೆ
ಕೊಬ್ಬಿದ ಕುರಿಯ ಕಟುಕ ಕಚಕ್ಕನೆ ಕತ್ತರಿಸಿದಂತೆ
ಮೃತ್ಯುರೂಪ ನಿರ್ದಾಕ್ಷಿಣ್ಯದಿ ಜೀವ ತುಂಡರಿಸಿ
ಎದೆಯೊಳಗಿನ ಭಾವಗಳ ನಿಮಿಷಾರ್ಧದಿ ಒರೆಸಿ

ಗಾಜಿನ ಮೇಲೆ ಬಿದ್ದ ಮಳೆಹನಿಯ
ಒರೆಸಿಬಿಡುವ ವೈಪರ್‌ನ ಕಾಯ
ಪದರು ಪದರಾಗಿ ಹೆಣೆದ ಸೃಷ್ಟಿ ವಿಶೇಷ ಕಸದಲ್ಲಿ!
ಮೊಟ್ಟೆ ಮಾಗಿ ಒಡೆದು ಜೀವವಾಗುವುದೆಲ್ಲಿ?

ಹಸಿಹಸಿ ಮೊಟ್ಟೆ ಕುಡಿದು ಜೀವ ಬಸಿವ
ನರರಾಕ್ಷಸರ ಈ ರುದ್ರತಾಂಡವ!
ಹೆಣ್ಣು ಭ್ರೂಣಗಳು ಹೆಣವಾಗಿ, ಮಣ್ಣಾಗಿ
ಗಂಡು ಭ್ರೂಣಗಳು ಹಣ್ಣಾಗಿ, ಮಾಗಿ

ಜೀವಂತ ಗಂಡು ಜೀವಕ್ಕೆ
ಅಶರೀರ ಹೆಣ್ಣು ಮರೀಚಿಕೆ
ಉತ್ತರವಿಲ್ಲದೇ ಈ ಘೋರಕೆ ಪ್ರಕೃತಿಯೊಳಗೆ?
ಕಾಲವೇ ಕ್ರಾಂತಿಮಂತ್ರ ಈ ಇಳೆಗೆ!?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ