Home / ಕವನ / ಕವಿತೆ / ಒಂದು ಸ್ವಪ್ನ

ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...