ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೫
Next post ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…