ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೫
Next post ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…