ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ
ನಡುವೆ ನಡೆದೆನು ತೆಪ್ಪಗೆ,
ಮನೋಭೂಮಿಯನುತ್ತು ಅಗಿಯಿತು
ತೇಜಪೂರಿತ ಘಟನೆಯು!
ಮೆತ್ತಗಾಸಿದ ತಲ್ಪತಳವೇ
ನನ್ನ ಯಾತ್ರೆಯ ಭೂಮಿಯು!!

ಮೇಲೆ ಭಾನುವು ಬಿಳಿಯ ಮುಗಿಲು
ಕೆಳಗೆ ಕೊರಕಲು ದಾರಿಯು;
ಹಾದು ನಡೆದೆನು ಏಳುಬೀಳುತ
ಏರಿದೆನು ಗಿರಿ ಮೇಲಕೆ!
ಬೆಟ್ಟತಪ್ಪಲು ಜಾರುಕಲ್ಗಳು
ಬೀಳುವೆನೊ ಎಂಬೆದರಿಕೆ!!

ಅಮರಲೋಕದ ಹೂವುತೋಟದ
ನೆನಪು ಸುಳಿಯಿತು ಮನದಲಿ
ಮಂದಮಾರುತ ಎತ್ತಿತಂದಾ
ಅಮರ ಗಾನವ ಕೇಳಿದೆ,
ಕೇಳಪೋದೆನು-ಶೂನ್ಯಲೋಕವು
ಗಾಳಿ, ಗಿರಿದುದಿ, ಮರಗಳೆ!

ಐಂದ್ರಜಾಲಿಕ ದೃಶ್ಯದಂತೆಯೆ
ಬೆಟ್ಟಗವಿಯಿಂ ಪಕ್ಕನೆ
ಇಂಪುಗಾನದ ದನಿಯ ಅಲೆಯೊಳು
ತನ್ನ ರೂಪನು ಸೇರಿಸಿ
ಬಂದಳೊರ್ವಳು ಇಂದುವದನೆಯು
ಇಂದು ರೂಪವ ಹಳಿಯಿಸಿ.

ಸುಳಿದಳೀಚೆಗೆ ಬೆಟ್ಟದುದಿಯಲಿ
ನಿಂತ ನಾನು ನನ್ನನು!
ಮರೆತು ನೋಡಿದೆ ವಿಶ್ವನಿರ್ಮಿತ
ಮಾಯೆ ರೂಪವ ನೆನೆದೆನೊ;
ರೂಪ ನೋಡುತ ನೀಲ ಬಾನಿನ
ಸ್ವಚ್ಚ ಶೀಲವ ಹಳಿದೆನೊ!

ಹೆರಳ ಕುರುಳು ಮುಡಿಯ ಮುಗುಳು
ಕಾಂತಿ ಬೀರುವ ಕಂಗಳು
ಬಾಲೆ ಸದ್ಗುಣೆ ಹಂಸಯಾನೆಯು
ಜಾಣೆ ನೋಟಕೆ-ಕೆನ್ನೆಯು
ಒಂಟಿಸರವನು ರತ್ನಮಾಲೆಯ
ಕಟ್ಟಿ ನೂಪುರ ರನ್ನೆಯು!

ನೋಡಿ ಹಿಗ್ಗಿದೆ ವನವು ಗಾಳಿಯು
ಹಿಗ್ಗಿತೆನ್ನೊಡೆ ಬೀಸುತ
ದೂರ ಸರಿದುವು ಸುತ್ತು ಸೇರಿದ
ಹಕ್ಕಿಮಿಗಗಳು ಭ್ರಮರವು;
ಒಬ್ಬನಾದೆನು ಮುಂದೆ ಸರಿದೆನು
ಪೋದ ಧೈರ್ಯವ ಕರೆದೆನು!

ಹೂವು ಎಲೆಗಳು ಎಲ್ಲಿ ಅಣಿಕಿಪು-
ವೆಂದು ನಾಚುಗೆಪಟ್ಟನೊ!
ಗಿರಿಯ ಮೇಲ್ಗಡೆ ಚೆನ್ನಕಾಣುವ
ಮುಗಿಲು ನಗುವುದೊ ಎಂದು ನಾ
ಭಾವಿಸುತ್ತಲಿ, ‘ಯಾರ ನೋಡುವಿ’
ಎಂದು ಕೇಳಿದೆನವಳನು.

‘ಯಾರ ಇಲ್ಲವು ಹಣ್ಣು ಹೂಗಳ-
ನಾಯ್ದು ಪೋಗಲು ಬಂದೆನೊ!
ಕಂಡು ಸೋತೆನು ಮನವು ಬಿಮ್ಮನೆ
ಎನ್ನ ನಿಲಿಸಿತು-ಇಲ್ಲಿಯೆ’
ಎಂದು ಹೇಳಲು, ‘ರಮಣಿ ಹೆದರದಿ
ರೆ’ಂದು ಪಕ್ಕದಲಿರಿತೆನೊ!

ಸರಸವಾಟದಲೊತ್ತು ಕಳೆಯುತ
ಮಾತುಮಾತಲಿ ಮುಳುಗುತ;
ನೋಟ ಬಿಂಬಾಧರವ ಹೊಕ್ಕಿತು,
ಕಣ್ಣು ಕಣ್ಣನು ನುಂಗಿತು!
ದೃಷ್ಠಿಹೊರಳಿತು-ತನುವು ಕೊಂಕಿತು;
ಕೈಯು ಎದೆಯಲಿ ನುಸುಳಿತು!!

ಮುದ್ದು ಮಾತಿನ ಮುದ್ರೆ ಕೆನ್ನೆಲಿ,
ಅಭಯ ಸೂಚನೆ ಬಾಯಲಿ-
ಜಾಣೆ ನಾಚುತಲಂಜಿ ಅಪ್ಪಿತು,
ಬಿಗಿದ ಅಪ್ಪಗೆ ಸುಖದಲಿ
ಇರಲು-ಪಾಪೀ ನಿದ್ದೆವಂಚನೆ
ಮಾಡಿ ಕೆಡಿಸಿತು ಸುಖವನು!!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೧೫
Next post ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys