Home / ಕವನ / ಕವಿತೆ / ಬದುಕೆಂದರೆ ಇಲ್ಲಿ…

ಬದುಕೆಂದರೆ ಇಲ್ಲಿ…

ಅನಿಧಿಕೃತ ಸಮರದಲಿ
ಜೀವ ವಿಶೇಷಗಳ ತಾಣ
ಕ್ಷಣದಲ್ಲಾಯ್ತು ಮಸಣ

ಕುಡಿಯೊಡೆದು ಚಿಗುರಿದ
ನಂದನವನವೆಲ್ಲಾ
ನಿಮಿಷದಲಿ
ಮರುಭೂಮಿಯಾಯ್ತಲ್ಲಾ!

ಗಡಿಮೀರಿ
ಒಳನುಗ್ಗಿದ್ದು ಅವರ ತಪ್ಪೊ?
ಬಿಟ್ಟಿದ್ದು ಇವರ ತಪ್ಪೊ?
ಬೇಕಿಲ್ಲ ತಪ್ಪುಸರಿಗಳ ಅಳತೆ
ರಾಜಕೀಯ ಕುತಂತ್ರದಲಿ
ತಕ್ಕಡಿ ಸರಿದೂಗೀತೇ?

ಕಪಟದೂತ್ಯವ ಆಡುವವರಾರೋ?
ದಾಳ ಒಗೆದವರಾರೋ?
ಗೆದ್ದವರಾರೋ? ಸೋತವರಾರೋ?
ಮುನ್ನುಗ್ಗಿದವರಾರೋ? ಹಿಮ್ಮೆಟ್ಟಿದವರಾರೋ?

ಏನಿಲ್ಲಾ, ಎಂತಿಲ್ಲ
ಸುಮ್ಮಸುಮ್ಮನೆ ಮಣ್ಣೊಳಗೆ
ರಕ್ತದ ನದಿಯಾದವರ
ಲೆಕ್ಕವಿಟ್ಟವರಾರು?
ಅವರಿವರ ತಪ್ಪಿಗೆ.
ತಪ್ಪಿಲ್ಲದೆಯೂ
ಬಲಿಪಶುವಾದರು ಹಲರು.

ನಮ್ಮವನದೋ, ಪರಕೀಯನದೋ
ಜೀವ ಜೀವವೇ ತಾನೇ?
ದೇಶಕ್ಕೆ ಗಡಿಯಷ್ಟೆ
ಸೃಷ್ಟಿಗೆ ಗಡಿಗಳಿವೆಯೆ?
ನಾಳೆಗೇ ಬೆಂಕಿಯೆಲ್ಲವೂ ಆರಿ
ಬೂದಿಯುಳಿದೀತು ಬರಿ.

ಆದರೆ… ಆದರೆ ಹೇಗಳಿಸುವುದು?
ಹೇಗಳಿಸುವುದು ಬಿಸಿ ನೆತ್ತರಿನ ಗುರುತುಗಳನ್ನು?
ಹೇಗೆ ಒರೆಸುವುದು ಸಂಬಂಧಿಗಳ
ಕಣ್ಣೀರಿನ ಶರಧಿಗಳನು?
ಬೇಕೆಂದರೂ ಈಗ
ತರಲಾದೀತೆ ಮತ್ತೆ ಜೀವಗಳನ್ನು?

ಬದುಕೆಂದರೆ ಇಲ್ಲಿ ಹೇ ತಂದೆ
ಮಾರಕಾಸ್ತ್ರಗಳಾಟವೇ?
ರುಂಡ ಚೆಂಡಾಡುವ ಹೂಟವೇ?
ರಾಶಿಹೆಣಗಳ ಕೂಟವೇ?
ಕಣ್ಣಾಮುಚ್ಚೆ ಮಕ್ಕಾಳಾಟವೇ?

ಬದುಕಿಸುವ ಮಂತ್ರ ಅರಿಯದ
ಹುಲುಮನುಜ
ಬದುಕು ಅಳಿಸುವ ತಂತ್ರ ಅರಿತದ್ದು
ಸರಿಯೇ ಪ್ರಭುವೇ?
ಇಲ್ಲಿ ಜೀವಕ್ಕೆ
ಬೆಲೆ ಇದೆಯೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...