Home / ಕವನ / ಕವಿತೆ / ಬದುಕೆಂದರೆ ಇಲ್ಲಿ…

ಬದುಕೆಂದರೆ ಇಲ್ಲಿ…

ಅನಿಧಿಕೃತ ಸಮರದಲಿ
ಜೀವ ವಿಶೇಷಗಳ ತಾಣ
ಕ್ಷಣದಲ್ಲಾಯ್ತು ಮಸಣ

ಕುಡಿಯೊಡೆದು ಚಿಗುರಿದ
ನಂದನವನವೆಲ್ಲಾ
ನಿಮಿಷದಲಿ
ಮರುಭೂಮಿಯಾಯ್ತಲ್ಲಾ!

ಗಡಿಮೀರಿ
ಒಳನುಗ್ಗಿದ್ದು ಅವರ ತಪ್ಪೊ?
ಬಿಟ್ಟಿದ್ದು ಇವರ ತಪ್ಪೊ?
ಬೇಕಿಲ್ಲ ತಪ್ಪುಸರಿಗಳ ಅಳತೆ
ರಾಜಕೀಯ ಕುತಂತ್ರದಲಿ
ತಕ್ಕಡಿ ಸರಿದೂಗೀತೇ?

ಕಪಟದೂತ್ಯವ ಆಡುವವರಾರೋ?
ದಾಳ ಒಗೆದವರಾರೋ?
ಗೆದ್ದವರಾರೋ? ಸೋತವರಾರೋ?
ಮುನ್ನುಗ್ಗಿದವರಾರೋ? ಹಿಮ್ಮೆಟ್ಟಿದವರಾರೋ?

ಏನಿಲ್ಲಾ, ಎಂತಿಲ್ಲ
ಸುಮ್ಮಸುಮ್ಮನೆ ಮಣ್ಣೊಳಗೆ
ರಕ್ತದ ನದಿಯಾದವರ
ಲೆಕ್ಕವಿಟ್ಟವರಾರು?
ಅವರಿವರ ತಪ್ಪಿಗೆ.
ತಪ್ಪಿಲ್ಲದೆಯೂ
ಬಲಿಪಶುವಾದರು ಹಲರು.

ನಮ್ಮವನದೋ, ಪರಕೀಯನದೋ
ಜೀವ ಜೀವವೇ ತಾನೇ?
ದೇಶಕ್ಕೆ ಗಡಿಯಷ್ಟೆ
ಸೃಷ್ಟಿಗೆ ಗಡಿಗಳಿವೆಯೆ?
ನಾಳೆಗೇ ಬೆಂಕಿಯೆಲ್ಲವೂ ಆರಿ
ಬೂದಿಯುಳಿದೀತು ಬರಿ.

ಆದರೆ… ಆದರೆ ಹೇಗಳಿಸುವುದು?
ಹೇಗಳಿಸುವುದು ಬಿಸಿ ನೆತ್ತರಿನ ಗುರುತುಗಳನ್ನು?
ಹೇಗೆ ಒರೆಸುವುದು ಸಂಬಂಧಿಗಳ
ಕಣ್ಣೀರಿನ ಶರಧಿಗಳನು?
ಬೇಕೆಂದರೂ ಈಗ
ತರಲಾದೀತೆ ಮತ್ತೆ ಜೀವಗಳನ್ನು?

ಬದುಕೆಂದರೆ ಇಲ್ಲಿ ಹೇ ತಂದೆ
ಮಾರಕಾಸ್ತ್ರಗಳಾಟವೇ?
ರುಂಡ ಚೆಂಡಾಡುವ ಹೂಟವೇ?
ರಾಶಿಹೆಣಗಳ ಕೂಟವೇ?
ಕಣ್ಣಾಮುಚ್ಚೆ ಮಕ್ಕಾಳಾಟವೇ?

ಬದುಕಿಸುವ ಮಂತ್ರ ಅರಿಯದ
ಹುಲುಮನುಜ
ಬದುಕು ಅಳಿಸುವ ತಂತ್ರ ಅರಿತದ್ದು
ಸರಿಯೇ ಪ್ರಭುವೇ?
ಇಲ್ಲಿ ಜೀವಕ್ಕೆ
ಬೆಲೆ ಇದೆಯೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...